<p><strong>ಹೊಸಕೋಟೆ:</strong> ಸುಮಾರು 13 ವರ್ಷಗಳ ಹಿಂದೆ ನಿಂತಿದ್ದ ಕೋಟೂರು ಗ್ರಾಮದ ಗ್ರಾಮ ದೇವತೆಗಳ ಊರಹಬ್ಬವನ್ನು ಬುಧವಾರ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.</p>.<p>ತಾಲ್ಲೂಕಿನ ಅನುಗೊಂಡಹಳ್ಳಿ ಹೋಬಳಿಯ ಮತ್ಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೂರಿನ ಬಸವೇಶ್ವರ, ವೇಣುಗೋಪಾಲ, ಆಂಜನೇಯ, ಓಂ ಶಕ್ತಿ ದೇವರಿಗೆ ಬೆಲ್ಲದ ದೀಪೋತ್ಸವ, ಅಣ್ಣೆಮ್ಮ ದೇವಿ, ಕಾವೇರಮ್ಮ, ಸಪಲಮ್ಮ, ಕಾಳಮ್ಮ, ಮಾರಮ್ಮ, ಮುನೇಶ್ವರ ಸ್ವಾಮಿ ದೇವರಿಗೆ ದೀಪೋತ್ಸವ, ಪಲ್ಲಕ್ಕಿಗಳ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.</p>.<p>ಏಪ್ರಿಲ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಗ್ರಾಮ ದೇವತೆಗಳಾದ ಕಾಳಮ್ಮ, ಕಾವೇರಮ್ಮ ಹಾಗು ಮುನೇಶ್ವರ ದೇವರುಗಳಿಗೆ ದೀಪೋತ್ಸವದ ಆರತಿ ಬೆಳಗಿ ದೇವರ ದರ್ಶನ ಪಡೆದರು.</p>.<p>ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಪೂಜಪ್ಪ ಮಾತನಾಡಿ, ಈ ಗ್ರಾಮ ದೇವತೆಗಳ ಹಬ್ಬ ಕಳೆದ 13 ವರ್ಷಗಳಿಂದ ಕಾರಣಾಂತರಗಳಿಂದ ನಿಲ್ಲಿಸಲಾಗಿತ್ತು. ಆದರೆ ಈ ವರ್ಷ ಗ್ರಾಮಸ್ಥರೆಲ್ಲ ಒಗ್ಗಟ್ಟಾಗಿ, ಪಕ್ಷಾತೀತವಾಗಿ, ಜಾತ್ಯತೀತವಾಗಿ ಗ್ರಾಮಸ್ಥರೆಲ್ಲ ಒಟ್ಟು ಗೂಡಿ ಆಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.</p>.<p>ಮುತ್ಸಂದ್ರ ವಿಎಸ್ಎಸ್ಎನ್ ಅಧ್ಯಕ್ಷ ವಿಜಯೇಂದ್ರ ಬಾಬು, ವೇಣುಗೋಪಾಲ್, ಹಾರೋಹಳ್ಳಿ ಕೇಶವರೆಡ್ಡಿ, ಚಂದ್ರಾ ರೆಡ್ಡಿ, ಸೌಮ್ಯ ಹರೀಶ್, ಸುಮನ್, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಸುಮಾರು 13 ವರ್ಷಗಳ ಹಿಂದೆ ನಿಂತಿದ್ದ ಕೋಟೂರು ಗ್ರಾಮದ ಗ್ರಾಮ ದೇವತೆಗಳ ಊರಹಬ್ಬವನ್ನು ಬುಧವಾರ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.</p>.<p>ತಾಲ್ಲೂಕಿನ ಅನುಗೊಂಡಹಳ್ಳಿ ಹೋಬಳಿಯ ಮತ್ಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೂರಿನ ಬಸವೇಶ್ವರ, ವೇಣುಗೋಪಾಲ, ಆಂಜನೇಯ, ಓಂ ಶಕ್ತಿ ದೇವರಿಗೆ ಬೆಲ್ಲದ ದೀಪೋತ್ಸವ, ಅಣ್ಣೆಮ್ಮ ದೇವಿ, ಕಾವೇರಮ್ಮ, ಸಪಲಮ್ಮ, ಕಾಳಮ್ಮ, ಮಾರಮ್ಮ, ಮುನೇಶ್ವರ ಸ್ವಾಮಿ ದೇವರಿಗೆ ದೀಪೋತ್ಸವ, ಪಲ್ಲಕ್ಕಿಗಳ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.</p>.<p>ಏಪ್ರಿಲ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಗ್ರಾಮ ದೇವತೆಗಳಾದ ಕಾಳಮ್ಮ, ಕಾವೇರಮ್ಮ ಹಾಗು ಮುನೇಶ್ವರ ದೇವರುಗಳಿಗೆ ದೀಪೋತ್ಸವದ ಆರತಿ ಬೆಳಗಿ ದೇವರ ದರ್ಶನ ಪಡೆದರು.</p>.<p>ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಪೂಜಪ್ಪ ಮಾತನಾಡಿ, ಈ ಗ್ರಾಮ ದೇವತೆಗಳ ಹಬ್ಬ ಕಳೆದ 13 ವರ್ಷಗಳಿಂದ ಕಾರಣಾಂತರಗಳಿಂದ ನಿಲ್ಲಿಸಲಾಗಿತ್ತು. ಆದರೆ ಈ ವರ್ಷ ಗ್ರಾಮಸ್ಥರೆಲ್ಲ ಒಗ್ಗಟ್ಟಾಗಿ, ಪಕ್ಷಾತೀತವಾಗಿ, ಜಾತ್ಯತೀತವಾಗಿ ಗ್ರಾಮಸ್ಥರೆಲ್ಲ ಒಟ್ಟು ಗೂಡಿ ಆಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.</p>.<p>ಮುತ್ಸಂದ್ರ ವಿಎಸ್ಎಸ್ಎನ್ ಅಧ್ಯಕ್ಷ ವಿಜಯೇಂದ್ರ ಬಾಬು, ವೇಣುಗೋಪಾಲ್, ಹಾರೋಹಳ್ಳಿ ಕೇಶವರೆಡ್ಡಿ, ಚಂದ್ರಾ ರೆಡ್ಡಿ, ಸೌಮ್ಯ ಹರೀಶ್, ಸುಮನ್, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>