<p>ಹೊಸಕೋಟೆ: ತಾಲ್ಲೂಕು ಕುರುಬರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಚುನಾವಣೆಯನ್ನು ಏಪ್ರಿಲ್ 3ರಂದು ನಡೆಸಲು ಆಡಳಿತ ಮಂಡಳಿಯ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.</p>.<p>ನಗರದ ಕನಕ ಸಮುದಾಯ ಭವನದಲ್ಲಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ತಾಲ್ಲೂಕು ಕುರುಬರ ಸಂಘದ ಪ್ರಸ್ತುತ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವ ಕಾರಣ ಚುನಾವಣೆಯನ್ನು ಇದೇ ಏಪ್ರಿಲ್ 3ಕ್ಕೆ ನಿಗದಿಪಡಿಸಲಾಗಿದೆ. ಅರ್ಹ ಸಂಘದ ಸದಸ್ಯರಿಗೆ ಮಾತ್ರ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.</p>.<p>ಮಾರ್ಚ್ 26, 27 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3 ವರೆಗೆ ನಾಮಪತ್ರ ಸಲ್ಲಿಕೆ, ಮಾರ್ಚ್ 28ರಂದು ನಾಮ ಪತ್ರಪರಿಶೀಲನೆ, 29ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ, 31ರಂದು ಚುನಾವಣೆಯಲ್ಲಿ ಸ್ಪರ್ದಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ, ಏಪ್ರಿಲ್ 3 ರಂದು ಬೆಳಗ್ಗೆ 9 ಗಂಟೆಯಿಂದ 3 ಗಂಟೆಯವರೆಗೆ ನಗರದ ಕನಕ ಭವನದಲ್ಲಿ ಚುನಾವಣೆ ನೆಡೆಯಲಿದೆ. 3 ಗಂಟೆಯ ನಂತರ ಮತ ಏಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕುರುಬರ ಸಂಘದ ಅಧ್ಯಕ್ಷ ರಾಮಾಂಜಿನಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂಘದಲ್ಲಿ ಹಳೆಯ 1329 ಸದಸ್ಯರಿದ್ಡು, ಇವರ ಜೊತೆಗೆ ನೂತನವಾಗಿ 750 ಸದಸ್ಯರು ಸೇರ್ಪಡೆಗೊಂಡಿದ್ದು, ಆದರೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಕ್ಕು ಕೇವಲ ಹಳೆಯ ಸದಸ್ಯರಿಗೆ ಮಾತ್ರ ಇರುತ್ತದೆ. ನೂತನವಾಗಿ ಸಂಘದ ಸದಸ್ಯರಾಗಿರುವವರಿಗೆ ಈ ಬಾರಿ ಚುನಾವಣೆಯಲ್ಲಿ ಮತದಾನದ ಹಕ್ಕು ಇರುವುದಿಲ್ಲ. ಇದು ಸಂಘದ ಬೈಲಾ ಪ್ರಕಾರ ಇದ್ದು ಮುಂದಿನ ಬಾರಿ ಚುನಾವಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದರು.</p>.<p>ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನ್ನಸಂದ್ರ ನಾಗರಾಜ್, ಕುರುಬರ ಸಂಘದ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ರಾಜಣ್ಣ, ಸಹ ಕಾರ್ಯದರ್ಶಿ ಕೆಂಪಣ್ಣ, ನಿರ್ದೇಶಕರಾದ ಚೌಡಪ್ಪ, ರಘುವೀರ್, ಹುಲ್ಲೂರಪ್ಪ, ಸಿ.ನಾಗರಾಜ್, ಮುನಿರಾಜ್, ನಾರಾಯಣ್, ರಾಜೇಂದ್ರ, ದಶರಥ್, ಎಸ್.ಪಿ ರಾಮು, ಟಿ.ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-15-1374973025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ತಾಲ್ಲೂಕು ಕುರುಬರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಚುನಾವಣೆಯನ್ನು ಏಪ್ರಿಲ್ 3ರಂದು ನಡೆಸಲು ಆಡಳಿತ ಮಂಡಳಿಯ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.</p>.<p>ನಗರದ ಕನಕ ಸಮುದಾಯ ಭವನದಲ್ಲಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ತಾಲ್ಲೂಕು ಕುರುಬರ ಸಂಘದ ಪ್ರಸ್ತುತ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವ ಕಾರಣ ಚುನಾವಣೆಯನ್ನು ಇದೇ ಏಪ್ರಿಲ್ 3ಕ್ಕೆ ನಿಗದಿಪಡಿಸಲಾಗಿದೆ. ಅರ್ಹ ಸಂಘದ ಸದಸ್ಯರಿಗೆ ಮಾತ್ರ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.</p>.<p>ಮಾರ್ಚ್ 26, 27 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3 ವರೆಗೆ ನಾಮಪತ್ರ ಸಲ್ಲಿಕೆ, ಮಾರ್ಚ್ 28ರಂದು ನಾಮ ಪತ್ರಪರಿಶೀಲನೆ, 29ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ, 31ರಂದು ಚುನಾವಣೆಯಲ್ಲಿ ಸ್ಪರ್ದಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ, ಏಪ್ರಿಲ್ 3 ರಂದು ಬೆಳಗ್ಗೆ 9 ಗಂಟೆಯಿಂದ 3 ಗಂಟೆಯವರೆಗೆ ನಗರದ ಕನಕ ಭವನದಲ್ಲಿ ಚುನಾವಣೆ ನೆಡೆಯಲಿದೆ. 3 ಗಂಟೆಯ ನಂತರ ಮತ ಏಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕುರುಬರ ಸಂಘದ ಅಧ್ಯಕ್ಷ ರಾಮಾಂಜಿನಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂಘದಲ್ಲಿ ಹಳೆಯ 1329 ಸದಸ್ಯರಿದ್ಡು, ಇವರ ಜೊತೆಗೆ ನೂತನವಾಗಿ 750 ಸದಸ್ಯರು ಸೇರ್ಪಡೆಗೊಂಡಿದ್ದು, ಆದರೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಕ್ಕು ಕೇವಲ ಹಳೆಯ ಸದಸ್ಯರಿಗೆ ಮಾತ್ರ ಇರುತ್ತದೆ. ನೂತನವಾಗಿ ಸಂಘದ ಸದಸ್ಯರಾಗಿರುವವರಿಗೆ ಈ ಬಾರಿ ಚುನಾವಣೆಯಲ್ಲಿ ಮತದಾನದ ಹಕ್ಕು ಇರುವುದಿಲ್ಲ. ಇದು ಸಂಘದ ಬೈಲಾ ಪ್ರಕಾರ ಇದ್ದು ಮುಂದಿನ ಬಾರಿ ಚುನಾವಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದರು.</p>.<p>ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನ್ನಸಂದ್ರ ನಾಗರಾಜ್, ಕುರುಬರ ಸಂಘದ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ರಾಜಣ್ಣ, ಸಹ ಕಾರ್ಯದರ್ಶಿ ಕೆಂಪಣ್ಣ, ನಿರ್ದೇಶಕರಾದ ಚೌಡಪ್ಪ, ರಘುವೀರ್, ಹುಲ್ಲೂರಪ್ಪ, ಸಿ.ನಾಗರಾಜ್, ಮುನಿರಾಜ್, ನಾರಾಯಣ್, ರಾಜೇಂದ್ರ, ದಶರಥ್, ಎಸ್.ಪಿ ರಾಮು, ಟಿ.ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-15-1374973025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>