<p><strong>ಹೊಸಕೋಟೆ:</strong> ಇಪ್ಪತ್ತು ವರ್ಷಗಳ ಹಿಂದೆ ಸರ್ಕಾರ ಮನ್ನಾ ಮಾಡಿದ್ದ ಸಾಲವನ್ನು ಮರು ಪಾವತಿಸುವಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಇದೀಗ ನಂದಗುಡಿ ಹೋಬಳಿಯ ಹಲವು ಗ್ರಾಮಸ್ಥರು ಹಾಗೂ ಮಹಿಳೆಯರಿಗೆ ನ್ಯಾಯಾಲಯದ ಮೂಲಕ ನೋಟಿಸ್ ಜಾರಿ ಮಾಡಿದೆ. </p>.<p>ಇದನ್ನು ಪ್ರತಿಭಟಿಸಿ ನಂದಗುಡಿ ಹೋಬಳಿಯ ಚೀಮಸಂದ್ರ, ತರಬಹಳ್ಳಿ, ಬನಹಳ್ಳಿ ನೆಲವಾಗಿಲು, ಬಳೆಚೌಡಪ್ಪನಹಳ್ಳಿ, ಬಾವಾಪುರ, ಇಟ್ಟಸಂದ್ರ ಸೇರಿದಂತೆ ಹಲವಾರು ಗ್ರಾಮಗಳ ಜನರು ಮಂಗಳವಾರ ತಾಲ್ಲೂಕಿನ ಮಲ್ಲಿಮಾಕನಪುರದ ಕರ್ನಾಟಕ ಗ್ರಾಮೀಣ ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>2005 ರಿಂದ 2010ರವರೆಗೆ ಅಂದಿನ ಸ್ತ್ರೀಶಕ್ತಿ ಸಂಘಗಳಿಗೆ ನೀಡಿದ್ದ ₹1 ಲಕ್ಷದಿಂದ ₹1.50 ಲಕ್ಷ ಸಾಲವನ್ನು 2013ರಲ್ಲಿ ಅಂದಿನ ಸರ್ಕಾರ ಮನ್ನಾ ಮಾಡಿತ್ತು. ಆ ಸಾಲವನ್ನು ಕಟ್ಟುವಂತೆ ಬ್ಯಾಂಕ್ ಈಗ ನೋಟಿಸ್ ನೀಡಿದೆ. ಈ ನೋಟಿಸ್ ಕುರಿತು ಸೂಕ್ತ ಸಮಜಾಯಿಷಿ ನೀಡುವಂತೆ ಪ್ರತಿಭಟನಕಾರು ಒತ್ತಾಯಿಸಿದರು. </p>.<p>ಮಲ್ಲಿಮಕನಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಂದಗುಡಿ ಹೋಬಳಿಯ ಹಲವು ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ನೀಡಿತ್ತು. ರೈತರ ಸಾಲದೊಂದಿಗೆ ಈ ಸಾಲಗಳನ್ನು 2013ರಲ್ಲಿ ಅಂದಿನ ಸರ್ಕಾರ ಮನ್ನಾ ಮಾಡಿರುವದಾಗಿ ಘೋಷಣೆ ಮಾಡಿತ್ತು. ಆಗ ಬ್ಯಾಂಕ್ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಸಾಲಮನ್ನಾ ಕಾಗದ ಪತ್ರಗಳಿಗೆ ಸಹಿ ಪಡೆದು ಹೋಗಿದ್ದರು.</p>.<p>ಆ ನಂತರ ಯಾವುದೇ ರೀತಿಯ ಸಾಲ ಮರುಪಾವತಿ ಮಾಡಿಲ್ಲ. ಬ್ಯಾಂಕ್ ಕೂಡ ಪಾವತಿಸಲು ಕೇಳಿರಲಿಲ್ಲ. ಈಗ ಏಕಾಏಕಿ ಲಕ್ಷ, ಲಕ್ಷ ಹಣ ಕಟ್ಟುವಂತೆ ಕೋರ್ಟ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದರು.</p>.<p>20 ವರ್ಷಗಳಲ್ಲಿ ಕೆಲವರು ಮದುವೆಯಾಗಿ ಹೋಗಿದ್ದಾರೆ. ಮತ್ತೆ ಕೆಲವರು ಮರಣ ಹೊಂದಿದ್ದಾರೆ. ಕೆಲವರು ಊರು ಖಾಲಿ ಮಾಡಿದ್ದಾರೆ. ಕೆಲವರಿಗೆ ವಯಸ್ಸಾಗಿದ್ದರೆ, ಇನ್ನೂ ಕೆಲವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೆಚ್ಚಿನವರಿಗೆ ಸಾಲ ಮರು ಪಾವತಿಸುವ ಶಕ್ತಿ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.<br><br> ಸಾಲ ಮನ್ನಾ ಆಗಿ ಎರಡು ದಶಕ ಕಳೆದಿದೆ. ನಿರುಮ್ಮಳವಾಗಿ ಜೀವನ ನಡೆಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಈ ರೀತಿಯ ನೋಟಿಸ್ ನೀಡಿರುವುದು ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳನ್ನು ದಂಗುಬಡಿಯುವಂತೆ ಮಾಡಿದೆ. ಈ ಕುರಿತು ಸಂಬಂಧಿಸಿದ ಸರ್ಕಾರ ಸೂಕ್ತ ತನಿಖೆ ನಡೆಸಿ ಅನ್ಯಾಯ ಸರಿಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಇಪ್ಪತ್ತು ವರ್ಷಗಳ ಹಿಂದೆ ಸರ್ಕಾರ ಮನ್ನಾ ಮಾಡಿದ್ದ ಸಾಲವನ್ನು ಮರು ಪಾವತಿಸುವಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಇದೀಗ ನಂದಗುಡಿ ಹೋಬಳಿಯ ಹಲವು ಗ್ರಾಮಸ್ಥರು ಹಾಗೂ ಮಹಿಳೆಯರಿಗೆ ನ್ಯಾಯಾಲಯದ ಮೂಲಕ ನೋಟಿಸ್ ಜಾರಿ ಮಾಡಿದೆ. </p>.<p>ಇದನ್ನು ಪ್ರತಿಭಟಿಸಿ ನಂದಗುಡಿ ಹೋಬಳಿಯ ಚೀಮಸಂದ್ರ, ತರಬಹಳ್ಳಿ, ಬನಹಳ್ಳಿ ನೆಲವಾಗಿಲು, ಬಳೆಚೌಡಪ್ಪನಹಳ್ಳಿ, ಬಾವಾಪುರ, ಇಟ್ಟಸಂದ್ರ ಸೇರಿದಂತೆ ಹಲವಾರು ಗ್ರಾಮಗಳ ಜನರು ಮಂಗಳವಾರ ತಾಲ್ಲೂಕಿನ ಮಲ್ಲಿಮಾಕನಪುರದ ಕರ್ನಾಟಕ ಗ್ರಾಮೀಣ ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>2005 ರಿಂದ 2010ರವರೆಗೆ ಅಂದಿನ ಸ್ತ್ರೀಶಕ್ತಿ ಸಂಘಗಳಿಗೆ ನೀಡಿದ್ದ ₹1 ಲಕ್ಷದಿಂದ ₹1.50 ಲಕ್ಷ ಸಾಲವನ್ನು 2013ರಲ್ಲಿ ಅಂದಿನ ಸರ್ಕಾರ ಮನ್ನಾ ಮಾಡಿತ್ತು. ಆ ಸಾಲವನ್ನು ಕಟ್ಟುವಂತೆ ಬ್ಯಾಂಕ್ ಈಗ ನೋಟಿಸ್ ನೀಡಿದೆ. ಈ ನೋಟಿಸ್ ಕುರಿತು ಸೂಕ್ತ ಸಮಜಾಯಿಷಿ ನೀಡುವಂತೆ ಪ್ರತಿಭಟನಕಾರು ಒತ್ತಾಯಿಸಿದರು. </p>.<p>ಮಲ್ಲಿಮಕನಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಂದಗುಡಿ ಹೋಬಳಿಯ ಹಲವು ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ನೀಡಿತ್ತು. ರೈತರ ಸಾಲದೊಂದಿಗೆ ಈ ಸಾಲಗಳನ್ನು 2013ರಲ್ಲಿ ಅಂದಿನ ಸರ್ಕಾರ ಮನ್ನಾ ಮಾಡಿರುವದಾಗಿ ಘೋಷಣೆ ಮಾಡಿತ್ತು. ಆಗ ಬ್ಯಾಂಕ್ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಸಾಲಮನ್ನಾ ಕಾಗದ ಪತ್ರಗಳಿಗೆ ಸಹಿ ಪಡೆದು ಹೋಗಿದ್ದರು.</p>.<p>ಆ ನಂತರ ಯಾವುದೇ ರೀತಿಯ ಸಾಲ ಮರುಪಾವತಿ ಮಾಡಿಲ್ಲ. ಬ್ಯಾಂಕ್ ಕೂಡ ಪಾವತಿಸಲು ಕೇಳಿರಲಿಲ್ಲ. ಈಗ ಏಕಾಏಕಿ ಲಕ್ಷ, ಲಕ್ಷ ಹಣ ಕಟ್ಟುವಂತೆ ಕೋರ್ಟ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದರು.</p>.<p>20 ವರ್ಷಗಳಲ್ಲಿ ಕೆಲವರು ಮದುವೆಯಾಗಿ ಹೋಗಿದ್ದಾರೆ. ಮತ್ತೆ ಕೆಲವರು ಮರಣ ಹೊಂದಿದ್ದಾರೆ. ಕೆಲವರು ಊರು ಖಾಲಿ ಮಾಡಿದ್ದಾರೆ. ಕೆಲವರಿಗೆ ವಯಸ್ಸಾಗಿದ್ದರೆ, ಇನ್ನೂ ಕೆಲವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೆಚ್ಚಿನವರಿಗೆ ಸಾಲ ಮರು ಪಾವತಿಸುವ ಶಕ್ತಿ ಇಲ್ಲದಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.<br><br> ಸಾಲ ಮನ್ನಾ ಆಗಿ ಎರಡು ದಶಕ ಕಳೆದಿದೆ. ನಿರುಮ್ಮಳವಾಗಿ ಜೀವನ ನಡೆಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಈ ರೀತಿಯ ನೋಟಿಸ್ ನೀಡಿರುವುದು ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳನ್ನು ದಂಗುಬಡಿಯುವಂತೆ ಮಾಡಿದೆ. ಈ ಕುರಿತು ಸಂಬಂಧಿಸಿದ ಸರ್ಕಾರ ಸೂಕ್ತ ತನಿಖೆ ನಡೆಸಿ ಅನ್ಯಾಯ ಸರಿಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>