<p>ದೊಡ್ಡದೇನಹಳ್ಳಿ (ಹೊಸಕೋಟೆ): ಶತಮಾನಗಳಿಂದ ದಲಿತರು, ಅಸ್ಪೃಶ್ಯರು ಅನುಭವಿಸುತ್ತಿರುವ ದುಸ್ಥಿತಿಯಿಂದ ಹೊರಬರಲು ಅಂಬೇಡ್ಕರ್ ಆಶಯದಂತೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದು ವೈಎಸ್ಎಂ ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ಜಡಿಗೆನಹಳ್ಳಿ ಹೋಬಳಿ ದೊಡ್ಡನಲ್ಲಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡದೇನಹಳ್ಳಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಶೋಷಿತ ವರ್ಗದ ಧ್ವನಿಯಾಗಿದ್ದು ಶಿಕ್ಷಣದ ಮೂಲಕ ಅವರ ಚಿಂತನೆಗಳನ್ನು ಇಂದಿನ ಯುವಪೀಳಿಗೆ ಅರ್ಥಮಾಡಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂದು ಹೇಳಿದರು.</p>.<p>ದಲಿತ ಹೋರಾಟಗಾರ ಚಿನ್ನಸ್ವಾಮಿ ಮಾತನಾಡಿ, ತುಳಿತಕ್ಕೆ ಒಳಗಾದ ಸಮುದಾಯಗಳು ಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಜಾರಿಗೊಳ್ಳಲು ಸಾಧ್ಯ ಎಂದು ಹೇಳಿದರು.</p>.<p>ಸಂಜಯ್ ಮತ್ತು ತಂಡದಿಂದ ಅಂಬೇಡ್ಕರ್ ಬದುಕಿನ ಕುರಿತಾದ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು.</p>.<p>ಅಂಬೇಡ್ಕರ್ ಜಯಂತಿಯಲ್ಲಿ ಲಕ್ಷ್ಮಣ್, ದೊಡ್ಡ ಅರಳೆಗೆರೆ ನಾಗೇಶ್, ಪೋಲಿಸ್ ಗೋಪಾಲಕೃಷ್ಣ, ರಮೇಶ್, ಅಪ್ಪಯಣ್ಣ ಹಾಗೂ ದೊಡ್ಡನಲ್ಲಾಲ ಅಶ್ವಥ್, ಅನಿಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-15-1895648594</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡದೇನಹಳ್ಳಿ (ಹೊಸಕೋಟೆ): ಶತಮಾನಗಳಿಂದ ದಲಿತರು, ಅಸ್ಪೃಶ್ಯರು ಅನುಭವಿಸುತ್ತಿರುವ ದುಸ್ಥಿತಿಯಿಂದ ಹೊರಬರಲು ಅಂಬೇಡ್ಕರ್ ಆಶಯದಂತೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದು ವೈಎಸ್ಎಂ ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ಜಡಿಗೆನಹಳ್ಳಿ ಹೋಬಳಿ ದೊಡ್ಡನಲ್ಲಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡದೇನಹಳ್ಳಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಶೋಷಿತ ವರ್ಗದ ಧ್ವನಿಯಾಗಿದ್ದು ಶಿಕ್ಷಣದ ಮೂಲಕ ಅವರ ಚಿಂತನೆಗಳನ್ನು ಇಂದಿನ ಯುವಪೀಳಿಗೆ ಅರ್ಥಮಾಡಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂದು ಹೇಳಿದರು.</p>.<p>ದಲಿತ ಹೋರಾಟಗಾರ ಚಿನ್ನಸ್ವಾಮಿ ಮಾತನಾಡಿ, ತುಳಿತಕ್ಕೆ ಒಳಗಾದ ಸಮುದಾಯಗಳು ಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಜಾರಿಗೊಳ್ಳಲು ಸಾಧ್ಯ ಎಂದು ಹೇಳಿದರು.</p>.<p>ಸಂಜಯ್ ಮತ್ತು ತಂಡದಿಂದ ಅಂಬೇಡ್ಕರ್ ಬದುಕಿನ ಕುರಿತಾದ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು.</p>.<p>ಅಂಬೇಡ್ಕರ್ ಜಯಂತಿಯಲ್ಲಿ ಲಕ್ಷ್ಮಣ್, ದೊಡ್ಡ ಅರಳೆಗೆರೆ ನಾಗೇಶ್, ಪೋಲಿಸ್ ಗೋಪಾಲಕೃಷ್ಣ, ರಮೇಶ್, ಅಪ್ಪಯಣ್ಣ ಹಾಗೂ ದೊಡ್ಡನಲ್ಲಾಲ ಅಶ್ವಥ್, ಅನಿಲ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-15-1895648594</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>