<p><strong>ಹೊಸಕೋಟೆ</strong>: ‘ತಾಲ್ಲೂಕನ್ನು ಸಮಸ್ಯೆ ರಹಿತವಾಗಿ ರೂಪಿಸುವ ಸಲುವಾಗಿ ಹಲವು ಯೋಜನೆ ರೂಪಿಸಿದ್ದು, ಅದರಂತೆ ವಸತಿ ರಹಿತರಿಗೆ ವಿವಿಧ ವಸತಿ ಯೋಜನೆಗಳಲ್ಲಿ ಸುಮಾರು ಎರಡು ಸಾವಿರ ಮನೆಗಳನ್ನ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p><p>ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ದಿ ಕಾಮಗಾರಿ ಚಾಲನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸೌಲಭ್ಯ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.</p><p>ಅಭಿವೃದ್ಧಿಯ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ತಾವರೆಕೆರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಸಿಗಲಿದೆ. ಇದರಿಂದ ಈ ಭಾಗದ ಜನರನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ ಎಂದರು.</p>.<p>2024-25ನೇ ಸಾಲಿನಲ್ಲಿ ಈ ಗ್ರಾ.ಪಂ ವ್ಯಾಪ್ತಿಯಲ್ಲಿ ₹6 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. 15ನೇ ಹಣಕಾಸಿನಲ್ಲಿ ₹75 ಲಕ್ಷ ಕಾಮಗಾರಿ, ನರೇಗಾದಲ್ಲಿ ಮೂರು ಕೋಟಿ ವೆಚ್ಚದಲ್ಲಿ ಕೆಲಸ ಮಾಡಲಾಗಿದೆ. ಅಂಬೇಡ್ಕರ್ ವಸತಿ ನಿಗಮದಡಿ ₹76 ಲಕ್ಷ ವೆಚ್ಚದಲ್ಲಿ 40 ಮನೆ ನಿರ್ಮಾಣ ಮಾಡಲಾಗಿದೆ. ತಾವರೆಕೆರೆ ಶಾಲೆಯನ್ನು ವೋಲ್ವೊ ಕಂಪನಿ ದತ್ತು ಪಡೆದು ₹2 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.</p>.<p>ಬಿಎಆರ್ಡಿಎ ನಿದೇರ್ಶಕ ಎಚ್.ಎಂ.ಸುಬ್ಬರಾಜ್, ಉದ್ಯಮಿ ಬಿ.ವಿ.ಬೈರೇಗೌಡ, ತಾ.ಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ, ಮಾಜಿ ತಾ.ಪಂ ಅಧ್ಯಕ್ಷ ಟಿಎಸ್ಆರ್ ರಾಜಶೇಖರ್, ಪಿಡಿಒ ಮುನಿಗಂಗಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ‘ತಾಲ್ಲೂಕನ್ನು ಸಮಸ್ಯೆ ರಹಿತವಾಗಿ ರೂಪಿಸುವ ಸಲುವಾಗಿ ಹಲವು ಯೋಜನೆ ರೂಪಿಸಿದ್ದು, ಅದರಂತೆ ವಸತಿ ರಹಿತರಿಗೆ ವಿವಿಧ ವಸತಿ ಯೋಜನೆಗಳಲ್ಲಿ ಸುಮಾರು ಎರಡು ಸಾವಿರ ಮನೆಗಳನ್ನ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p><p>ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ದಿ ಕಾಮಗಾರಿ ಚಾಲನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸೌಲಭ್ಯ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.</p><p>ಅಭಿವೃದ್ಧಿಯ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ತಾವರೆಕೆರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಸಿಗಲಿದೆ. ಇದರಿಂದ ಈ ಭಾಗದ ಜನರನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ ಎಂದರು.</p>.<p>2024-25ನೇ ಸಾಲಿನಲ್ಲಿ ಈ ಗ್ರಾ.ಪಂ ವ್ಯಾಪ್ತಿಯಲ್ಲಿ ₹6 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. 15ನೇ ಹಣಕಾಸಿನಲ್ಲಿ ₹75 ಲಕ್ಷ ಕಾಮಗಾರಿ, ನರೇಗಾದಲ್ಲಿ ಮೂರು ಕೋಟಿ ವೆಚ್ಚದಲ್ಲಿ ಕೆಲಸ ಮಾಡಲಾಗಿದೆ. ಅಂಬೇಡ್ಕರ್ ವಸತಿ ನಿಗಮದಡಿ ₹76 ಲಕ್ಷ ವೆಚ್ಚದಲ್ಲಿ 40 ಮನೆ ನಿರ್ಮಾಣ ಮಾಡಲಾಗಿದೆ. ತಾವರೆಕೆರೆ ಶಾಲೆಯನ್ನು ವೋಲ್ವೊ ಕಂಪನಿ ದತ್ತು ಪಡೆದು ₹2 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದರು.</p>.<p>ಬಿಎಆರ್ಡಿಎ ನಿದೇರ್ಶಕ ಎಚ್.ಎಂ.ಸುಬ್ಬರಾಜ್, ಉದ್ಯಮಿ ಬಿ.ವಿ.ಬೈರೇಗೌಡ, ತಾ.ಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ, ಮಾಜಿ ತಾ.ಪಂ ಅಧ್ಯಕ್ಷ ಟಿಎಸ್ಆರ್ ರಾಜಶೇಖರ್, ಪಿಡಿಒ ಮುನಿಗಂಗಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>