<p><strong>ಜಡಿಗೇನಹಳ್ಳಿ (ಹೊಸಕೋಟೆ):</strong> ಸನಾತನ ಧರ್ಮ, ಅಧ್ಯಾತ್ಮಿಕತೆ, ಪರಂಪರೆ, ದೇವಸ್ಥಾನ ಹಾಗೂ ಮಠ-ಮಂದಿರಗಳೇ ದೇಶದ ವೈಶಿಷ್ಟ್ಯತೆಗಳು. ಇವು ಭಾರತವನ್ನು ಜಗತ್ತಿನ ಮುಂದೆ ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವ ಶಕ್ತಿ ಸಾಮರ್ಥ್ಯ ಹೊಂದಿವೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿ ವ್ಯಾಪ್ತಿಯ ಪರಮನಹಳ್ಳಿ ಗ್ರಾಮದಲ್ಲಿ ಸಪ್ತಮಾತೆಯರ ದೇವಾಲಯದಲ್ಲಿ ದೇವರ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ದಾಬಸ್ಪೇಟೆಯಿಂದ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮಾರ್ಗವಾಗಿ ಹೊಸೂರು ರಸ್ತೆವರೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸ್ಥಳದಲ್ಲಿ ದೇವಾಲಯ ನಿರ್ಮಿಸಿರುವುದು ಶ್ಲಾಘನೀಯ ಎಂದರು.</p>.<p>ದೇವಾಲಯದ ನಿರ್ಮಾತೃ ಪಿ.ಕೆ. ರಾಜಗೋಪಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಂಗಳನಾಥ ಸ್ವಾಮೀಜಿ, ಎಚ್.ಸಿ. ತಮ್ಮೇಶ್ ಗೌಡ, ಸುರೇಶ್ ಕೆ.ಎಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಡಿಗೇನಹಳ್ಳಿ (ಹೊಸಕೋಟೆ):</strong> ಸನಾತನ ಧರ್ಮ, ಅಧ್ಯಾತ್ಮಿಕತೆ, ಪರಂಪರೆ, ದೇವಸ್ಥಾನ ಹಾಗೂ ಮಠ-ಮಂದಿರಗಳೇ ದೇಶದ ವೈಶಿಷ್ಟ್ಯತೆಗಳು. ಇವು ಭಾರತವನ್ನು ಜಗತ್ತಿನ ಮುಂದೆ ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವ ಶಕ್ತಿ ಸಾಮರ್ಥ್ಯ ಹೊಂದಿವೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿ ವ್ಯಾಪ್ತಿಯ ಪರಮನಹಳ್ಳಿ ಗ್ರಾಮದಲ್ಲಿ ಸಪ್ತಮಾತೆಯರ ದೇವಾಲಯದಲ್ಲಿ ದೇವರ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ದಾಬಸ್ಪೇಟೆಯಿಂದ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮಾರ್ಗವಾಗಿ ಹೊಸೂರು ರಸ್ತೆವರೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸ್ಥಳದಲ್ಲಿ ದೇವಾಲಯ ನಿರ್ಮಿಸಿರುವುದು ಶ್ಲಾಘನೀಯ ಎಂದರು.</p>.<p>ದೇವಾಲಯದ ನಿರ್ಮಾತೃ ಪಿ.ಕೆ. ರಾಜಗೋಪಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಂಗಳನಾಥ ಸ್ವಾಮೀಜಿ, ಎಚ್.ಸಿ. ತಮ್ಮೇಶ್ ಗೌಡ, ಸುರೇಶ್ ಕೆ.ಎಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>