<p><strong>ಓಬಳಾಪುರ(ಹೊಸಕೋಟೆ):</strong> ತಾಲ್ಲೂಕಿನ ಅನುಗೊಂಡಹಳ್ಳಿ ಹೋಬಳಿಯ ಓಬಳಾಪುರದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗುವಂತೆ ಪರಿಶಿಷ್ಟರ ನೇತೃತ್ವದಲ್ಲಿ ಬಿಸಿಲು ಮಾರಮ್ಮ ದೇವಿ ಜಾತ್ರಾ ಮಹೋತ್ಸವ ವೈಭವದಿಂದ ನೆರವೇರಿತು.</p>.<p>ದಲಿತ ಸಮುದಾಯದವರು ಬಿಸಿಲು ಮಾರಮ್ಮ ದೇವಿ ತೇರು ಎಳೆದು ಸಂಭ್ರಮಿಸಿದರು. ನಂತರ ದಲಿತ ಸಮುದಾಯದ ಮುಖಂಡರು ಮಹಿಳೆಯರು, ಯುವಕರು ಮತ್ತು ಕುಟುಂಬಸ್ಥರು ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.</p>.<p>ದಲಿತ ಕುಟುಂಬಗಳ ಹಿರಿಯರು ದೇವಿಗೆ ಮಂಗಳಾರತಿ ಬೆಳಗಿ, ಸಕಲ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಹೋತ್ಸವ ಪ್ರಯುಕ್ತ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ದೇವಿಯ ಉತ್ಸವ ಮೂರ್ತಿ ಭವ್ಯ ಮೆರವಣಿಗೆ ನಡೆಯಿತು. ಕರಗ, ಕಂಸಾಳೆ, ಡೊಳ್ಳು ಕುಣಿತ ಮತ್ತು ತಮಟೆ ವಾದನಗಳ ನಾದಕ್ಕೆ ಭಕ್ತರು ಹೆಜ್ಜೆ ಹಾಕಿದರು.</p>.<p>ಜಾತ್ರೆ ಅಂಗವಾಗಿ ರಾತ್ರಿಯ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೆಳೆದವು. ಭಕ್ತಿಗೀತೆಗಳ ಗಾಯನ, ಸ್ಥಳೀಯ ಕಲಾವಿದರಿಂದ ನಾಟಕ ಪ್ರದರ್ಶನ ಮತ್ತು ಯುವಕರಿಂದ ನೃತ್ಯ ಪ್ರದರ್ಶನಗಳು ಜರುಗಿದವು. ಇಡೀ ಗ್ರಾಮವು ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು.</p>.<p>ಓಬಳಾಪುರ ಶ್ರೀನಿವಾಸ್, ವಕೀಲರು ಅಂಬರೀಶ್, ಚೇತನ್(ಧನರಾಜು) ಲಕ್ಷ್ಮಯ್ಯ, ವೆಂಕಟಸ್ವಾಮಿ. ಆನಂದ್. ಕಿಶೋರ್. ಚಂದ್ರು ಪೂಜಾರಿ, ಮಲ್ಲಿಕಾರ್ಜುನ್, ನಂದಪ್ಪ, ಸ್ವರೂಪ್, ರಘುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-15-920194752</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಓಬಳಾಪುರ(ಹೊಸಕೋಟೆ):</strong> ತಾಲ್ಲೂಕಿನ ಅನುಗೊಂಡಹಳ್ಳಿ ಹೋಬಳಿಯ ಓಬಳಾಪುರದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗುವಂತೆ ಪರಿಶಿಷ್ಟರ ನೇತೃತ್ವದಲ್ಲಿ ಬಿಸಿಲು ಮಾರಮ್ಮ ದೇವಿ ಜಾತ್ರಾ ಮಹೋತ್ಸವ ವೈಭವದಿಂದ ನೆರವೇರಿತು.</p>.<p>ದಲಿತ ಸಮುದಾಯದವರು ಬಿಸಿಲು ಮಾರಮ್ಮ ದೇವಿ ತೇರು ಎಳೆದು ಸಂಭ್ರಮಿಸಿದರು. ನಂತರ ದಲಿತ ಸಮುದಾಯದ ಮುಖಂಡರು ಮಹಿಳೆಯರು, ಯುವಕರು ಮತ್ತು ಕುಟುಂಬಸ್ಥರು ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.</p>.<p>ದಲಿತ ಕುಟುಂಬಗಳ ಹಿರಿಯರು ದೇವಿಗೆ ಮಂಗಳಾರತಿ ಬೆಳಗಿ, ಸಕಲ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗಿತ್ತು.</p>.<p>ಮಹೋತ್ಸವ ಪ್ರಯುಕ್ತ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ದೇವಿಯ ಉತ್ಸವ ಮೂರ್ತಿ ಭವ್ಯ ಮೆರವಣಿಗೆ ನಡೆಯಿತು. ಕರಗ, ಕಂಸಾಳೆ, ಡೊಳ್ಳು ಕುಣಿತ ಮತ್ತು ತಮಟೆ ವಾದನಗಳ ನಾದಕ್ಕೆ ಭಕ್ತರು ಹೆಜ್ಜೆ ಹಾಕಿದರು.</p>.<p>ಜಾತ್ರೆ ಅಂಗವಾಗಿ ರಾತ್ರಿಯ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೆಳೆದವು. ಭಕ್ತಿಗೀತೆಗಳ ಗಾಯನ, ಸ್ಥಳೀಯ ಕಲಾವಿದರಿಂದ ನಾಟಕ ಪ್ರದರ್ಶನ ಮತ್ತು ಯುವಕರಿಂದ ನೃತ್ಯ ಪ್ರದರ್ಶನಗಳು ಜರುಗಿದವು. ಇಡೀ ಗ್ರಾಮವು ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು.</p>.<p>ಓಬಳಾಪುರ ಶ್ರೀನಿವಾಸ್, ವಕೀಲರು ಅಂಬರೀಶ್, ಚೇತನ್(ಧನರಾಜು) ಲಕ್ಷ್ಮಯ್ಯ, ವೆಂಕಟಸ್ವಾಮಿ. ಆನಂದ್. ಕಿಶೋರ್. ಚಂದ್ರು ಪೂಜಾರಿ, ಮಲ್ಲಿಕಾರ್ಜುನ್, ನಂದಪ್ಪ, ಸ್ವರೂಪ್, ರಘುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-15-920194752</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>