<p><strong>ಹೊಸಕೋಟೆ</strong>: ತಾಲ್ಲೂಕಿನ ಅನುಗೊಂಡನಹಳ್ಳಿ ಮತ್ತು ಹೊಸಕೋಟೆ ನಗರಕ್ಕೆ ಸಂಪರ್ಕಕ್ಕೆ ತೊಡಕು ಉಂಟು ಮಾಡಿದ್ದ ತಾಲ್ಲೂಕಿನ ಕೊರಳೂರು ಗ್ರಾಮದ ರೈಲ್ವೆ ಮೇಲ್ಸೇತುವೆ ಮತ್ತು ದೇವನಗೊಂದಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ. </p>.<p>ಈ ಪ್ರಕಾರ ಕೊರಳೂರು ರೈಲ್ವೆ ಮೇಲ್ಸೇತುವೆಗೆ ₹97.27 ಕೋಟಿ ಮತ್ತು ದೇವನಗೊಂದಿ ರೈಲ್ವೆ ಮೇಲ್ಸೇತುವೆಗೆ ₹12 ಕೋಟಿ ಸೇರಿದಂತೆ ಒಟ್ಟಾರೆ ₹109.27 ಕೋಟಿ ಅನುದಾನ ಸಿಕ್ಕಿದೆ. ಈ ಮೇಲ್ಸೇತುವೆ ನಿರ್ಮಾಣದಿಂದ ದಶಕಗಳ ಸಂಚಾರ ದಟ್ಟಣೆ ಸಮಸ್ಯೆಗೆ ಮುಕ್ತಿ ದೊರಕಲಿದೆ ಎಂದು ತಿಳಿದುಬಂದಿದೆ. </p>.<p>ರಾಷ್ಟ್ರೀಯ ಹೆದ್ದಾರಿ 207ರ ಕೊರಳೂರು ಗ್ರಾಮದ ಬಳಿ ಹಾದು ಹೋಗಿರುವ ರೈಲ್ವೆ ಹಳಿಗೆ ಅಡ್ಡಲಾಗಿ ಸಣ್ಣ ನೀರಾವರಿ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿವೆ.</p>.<p>ತಾಲ್ಲೂಕಿನ ದೇವನಗೊಂದಿ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಲೋಕೋಪಯೋಗಿ ಮತ್ತು ರೈಲ್ವೆ ಇಲಾಖೆ ಸಹಯೋಗದಲ್ಲಿ ನಿರ್ಮಾಣವಾಗಬೇಕಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದರಿಂದ ಸಂಚಾರ ದಟ್ಟಣೆ ಎದುರಾಗಿತ್ತು. ಈ ಸಮಸ್ಯೆ ಕುರಿತು ಶಾಸಕರು ಮತ್ತು ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಲಾಗಿತ್ತು. ಜೊತೆಗೆ ‘ಪ್ರಜಾವಾಣಿ’ ಪತ್ರಿಕೆಯು ಈ ಸಂಬಂಧ ಹಲವು ವರದಿಗಳನ್ನು ಪ್ರಕಟಿಸಿ, ಗಮನ ಸೆಳೆಯುವ ಕೆಲಸ ಮಾಡಿತ್ತು. ಇದೀಗ ಕಾಮಗಾರಿ ಆರಂಭಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. </p>.<p>ಕೊರಳೂರು ಬಳಿ ಕೆ.ಸಿ. ವ್ಯಾಲಿ ನೀರಿನ ಪೈಪ್ಲೈನ್ ಹಾದು ಹೋಗಿದೆ. ಹಾಗಾಗಿ, ಮೇಲ್ಸೇತುವೆ ನಿರ್ಮಾಣ ಸಣ್ಣ ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರಲಿದೆ. ಎರಡೂ ಇಲಾಖೆಯಿಂದ ಅಗತ್ಯ ತಾಂತ್ರಿಕ ಕಾರ್ಯ ಮುಗಿಸಿ ಅಂತಿಮವಾಗಿ ಅಗತ್ಯ ಅನುದಾನ ₹97.27ಕೋಟಿಗೆ ಅನುಮೋದನೆ ಸಿಕ್ಕಿದೆ. ಇನ್ನೊಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಂಚಾರ ದಟ್ಟಣೆಗೆ ಮುಕ್ತಿ ದೊರೆಯಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ತಾಲ್ಲೂಕಿನ ಅನುಗೊಂಡನಹಳ್ಳಿ ಮತ್ತು ಹೊಸಕೋಟೆ ನಗರಕ್ಕೆ ಸಂಪರ್ಕಕ್ಕೆ ತೊಡಕು ಉಂಟು ಮಾಡಿದ್ದ ತಾಲ್ಲೂಕಿನ ಕೊರಳೂರು ಗ್ರಾಮದ ರೈಲ್ವೆ ಮೇಲ್ಸೇತುವೆ ಮತ್ತು ದೇವನಗೊಂದಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ. </p>.<p>ಈ ಪ್ರಕಾರ ಕೊರಳೂರು ರೈಲ್ವೆ ಮೇಲ್ಸೇತುವೆಗೆ ₹97.27 ಕೋಟಿ ಮತ್ತು ದೇವನಗೊಂದಿ ರೈಲ್ವೆ ಮೇಲ್ಸೇತುವೆಗೆ ₹12 ಕೋಟಿ ಸೇರಿದಂತೆ ಒಟ್ಟಾರೆ ₹109.27 ಕೋಟಿ ಅನುದಾನ ಸಿಕ್ಕಿದೆ. ಈ ಮೇಲ್ಸೇತುವೆ ನಿರ್ಮಾಣದಿಂದ ದಶಕಗಳ ಸಂಚಾರ ದಟ್ಟಣೆ ಸಮಸ್ಯೆಗೆ ಮುಕ್ತಿ ದೊರಕಲಿದೆ ಎಂದು ತಿಳಿದುಬಂದಿದೆ. </p>.<p>ರಾಷ್ಟ್ರೀಯ ಹೆದ್ದಾರಿ 207ರ ಕೊರಳೂರು ಗ್ರಾಮದ ಬಳಿ ಹಾದು ಹೋಗಿರುವ ರೈಲ್ವೆ ಹಳಿಗೆ ಅಡ್ಡಲಾಗಿ ಸಣ್ಣ ನೀರಾವರಿ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿವೆ.</p>.<p>ತಾಲ್ಲೂಕಿನ ದೇವನಗೊಂದಿ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಲೋಕೋಪಯೋಗಿ ಮತ್ತು ರೈಲ್ವೆ ಇಲಾಖೆ ಸಹಯೋಗದಲ್ಲಿ ನಿರ್ಮಾಣವಾಗಬೇಕಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದರಿಂದ ಸಂಚಾರ ದಟ್ಟಣೆ ಎದುರಾಗಿತ್ತು. ಈ ಸಮಸ್ಯೆ ಕುರಿತು ಶಾಸಕರು ಮತ್ತು ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಲಾಗಿತ್ತು. ಜೊತೆಗೆ ‘ಪ್ರಜಾವಾಣಿ’ ಪತ್ರಿಕೆಯು ಈ ಸಂಬಂಧ ಹಲವು ವರದಿಗಳನ್ನು ಪ್ರಕಟಿಸಿ, ಗಮನ ಸೆಳೆಯುವ ಕೆಲಸ ಮಾಡಿತ್ತು. ಇದೀಗ ಕಾಮಗಾರಿ ಆರಂಭಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. </p>.<p>ಕೊರಳೂರು ಬಳಿ ಕೆ.ಸಿ. ವ್ಯಾಲಿ ನೀರಿನ ಪೈಪ್ಲೈನ್ ಹಾದು ಹೋಗಿದೆ. ಹಾಗಾಗಿ, ಮೇಲ್ಸೇತುವೆ ನಿರ್ಮಾಣ ಸಣ್ಣ ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರಲಿದೆ. ಎರಡೂ ಇಲಾಖೆಯಿಂದ ಅಗತ್ಯ ತಾಂತ್ರಿಕ ಕಾರ್ಯ ಮುಗಿಸಿ ಅಂತಿಮವಾಗಿ ಅಗತ್ಯ ಅನುದಾನ ₹97.27ಕೋಟಿಗೆ ಅನುಮೋದನೆ ಸಿಕ್ಕಿದೆ. ಇನ್ನೊಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಂಚಾರ ದಟ್ಟಣೆಗೆ ಮುಕ್ತಿ ದೊರೆಯಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>