<p><strong>ಸಮೇತನಹಳ್ಳಿ(ಹೊಸಕೋಟೆ):</strong> ಗ್ರಾಮ ಪಂಚಾಯಿತಿಯಿಂದ 140ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸಮೂಹ ಸೀಮಂತ ನಡೆಸಲಾಯಿತು.ಸಂಪ್ರದಾಯದಂತೆ ಶಾಸ್ತ್ರ ನೆರವೇರಿಸಲಾಯಿತು.</p>.<p>ಪ್ರತಿಯೊಬ್ಬ ಗರ್ಭಿಣಿಯರಿಗೂ ಅರಿಶಿನ-ಕುಂಕುಮ ನೀಡಿ, ಹೂವು, ಹಣ್ಣು, ಬಳೆ ಹಾಗೂ ಉಡುಗೊರೆ ನೀಡಲಾಯಿತು.</p>.<p>ಯಾವುದೇ ಹೆಣ್ಣಿಗೆ ಗರ್ಭಾವಸ್ಥೆಯ ಸಮಯದಲ್ಲಿ ಸಂತೋಷ ಮತ್ತು ಉತ್ತಮ ಆರೈಕೆ ವಾತಾವರಣ ಸೃಷ್ಟಿಸಬೇಕು. ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ ಎಂದು ಶಾಸಕರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.</p>.<p>ಗರ್ಭಿಣಿಯರಿಗೆ ಮಗುವಿನ ಆರೋಗ್ಯ ಹಾಗೂ ಪೌಷ್ಟಿಕಾಂಶದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಗ್ರಾಮ ಪಂಚಾಯಿತಿಯು ಈ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾ.ಪಂ ಇಒ ಮುನಿಯಪ್ಪ, ಸಮೇತನಹಳ್ಳಿ ಗ್ರಾ.ಪಂ. ಅಧ್ಯಕ್ಷ ಕಾಂತರಾಜು, ಪಿಡಿಒ ಪ್ರಸಾದ್, ಬಮೂಲ್ ನಿರ್ದೇಶಕ ಕೆಎಂಎಂ ಮಂಜುನಾಥ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಮುತ್ಕೂರು ಮುನಿರಾಜು, ಮಾಜಿ ಅಧ್ಯಕ್ಷ ಬಾಬುರೆಡ್ಡಿ, ಹೊಸಕೋಟೆ ಯೋಜನಾ ಪ್ರಾಧಿಕಾರದ ಸದಸ್ಯರಾದ ಕೆ.ಸಿ.ಸುರೇಶ್ ಗೌಡ, ಸಮೇತನಹಳ್ಳಿ ಸೊಣ್ಣಪ್ಪ, ಯಲ್ಲಪ್ಪ , ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾರೆಡ್ಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-15-1558401969</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಮೇತನಹಳ್ಳಿ(ಹೊಸಕೋಟೆ):</strong> ಗ್ರಾಮ ಪಂಚಾಯಿತಿಯಿಂದ 140ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸಮೂಹ ಸೀಮಂತ ನಡೆಸಲಾಯಿತು.ಸಂಪ್ರದಾಯದಂತೆ ಶಾಸ್ತ್ರ ನೆರವೇರಿಸಲಾಯಿತು.</p>.<p>ಪ್ರತಿಯೊಬ್ಬ ಗರ್ಭಿಣಿಯರಿಗೂ ಅರಿಶಿನ-ಕುಂಕುಮ ನೀಡಿ, ಹೂವು, ಹಣ್ಣು, ಬಳೆ ಹಾಗೂ ಉಡುಗೊರೆ ನೀಡಲಾಯಿತು.</p>.<p>ಯಾವುದೇ ಹೆಣ್ಣಿಗೆ ಗರ್ಭಾವಸ್ಥೆಯ ಸಮಯದಲ್ಲಿ ಸಂತೋಷ ಮತ್ತು ಉತ್ತಮ ಆರೈಕೆ ವಾತಾವರಣ ಸೃಷ್ಟಿಸಬೇಕು. ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ ಎಂದು ಶಾಸಕರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.</p>.<p>ಗರ್ಭಿಣಿಯರಿಗೆ ಮಗುವಿನ ಆರೋಗ್ಯ ಹಾಗೂ ಪೌಷ್ಟಿಕಾಂಶದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಗ್ರಾಮ ಪಂಚಾಯಿತಿಯು ಈ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾ.ಪಂ ಇಒ ಮುನಿಯಪ್ಪ, ಸಮೇತನಹಳ್ಳಿ ಗ್ರಾ.ಪಂ. ಅಧ್ಯಕ್ಷ ಕಾಂತರಾಜು, ಪಿಡಿಒ ಪ್ರಸಾದ್, ಬಮೂಲ್ ನಿರ್ದೇಶಕ ಕೆಎಂಎಂ ಮಂಜುನಾಥ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಮುತ್ಕೂರು ಮುನಿರಾಜು, ಮಾಜಿ ಅಧ್ಯಕ್ಷ ಬಾಬುರೆಡ್ಡಿ, ಹೊಸಕೋಟೆ ಯೋಜನಾ ಪ್ರಾಧಿಕಾರದ ಸದಸ್ಯರಾದ ಕೆ.ಸಿ.ಸುರೇಶ್ ಗೌಡ, ಸಮೇತನಹಳ್ಳಿ ಸೊಣ್ಣಪ್ಪ, ಯಲ್ಲಪ್ಪ , ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾರೆಡ್ಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-15-1558401969</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>