<p><strong>ಸೂಲಿಬೆಲೆ</strong> (ಹೊಸಕೋಟೆ): ತಾಲ್ಲೂಕಿಗೆ ಅನುದಾನ ತರಲು ಸದಾ ಸಿದ್ಧ. ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು. ಆಗ ಮಾತ್ರವೇ ತಾಲ್ಲೂಕಿನ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ಆರ್ಡಿಪಿಆರ್ ಅನುದಾನದಡಿ ₹2 ಕೋಟಿ ವೆಚ್ಚದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಅಂಕೋನಹಳ್ಳಿ, ನಲ್ಲಗಾನಹಳ್ಳಿ, ಅರಸನಹಳ್ಳಿ, ಬೆಟ್ಟಹಳ್ಳಿ, ಗಿಡ್ಡಪ್ಪನಹಳ್ಳಿ, ವಳಗೆರೆಪುರ, ಸಾದಪ್ಪನಹಳ್ಳಿ, ಅತ್ತಿಬೆಲೆ, ಹಸಿಗಾಳ, ಸೊಣ್ಣಹಳ್ಳಿಪುರ, ತಿಮ್ಮಸಂದ್ರ ಗ್ರಾಮಗಳಲ್ಲಿ ತಲಾ ₹20 ಲಕ್ಷ ವೆಚ್ಚದ ಸಿ.ಸಿ ರಸ್ತೆ ಮತ್ತು ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಬಿ.ಎನ್.ಗೋಪಾಲಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಎಂ.ಬಿ.ವೆಂಕಟೇಶ್, ನಾರಾಯಣಗೌಡ, ಅಕ್ಬರ್ ಅಲಿಖಾನ್, ಸುರೇಶ್, ಅತ್ತಿಬೆಲೆ ನಾಗೇಶ್, ಬಸವರಾಜ್, ಅರಸನಹಳ್ಳಿ ಶಿವಣ್ಣ, ಡಿ.ಸಿ ಲಕ್ಷ್ಮಿ, ಲಾರಿ ಕೃಷ್ಣಪ್ಪ, ಕೃಷ್ಣಪ್ಪ, ಸೋಮಶೇಖರ್, ಪಿಳ್ಳೆಗೌಡ, ಅಶ್ವಥ್, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ</strong> (ಹೊಸಕೋಟೆ): ತಾಲ್ಲೂಕಿಗೆ ಅನುದಾನ ತರಲು ಸದಾ ಸಿದ್ಧ. ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು. ಆಗ ಮಾತ್ರವೇ ತಾಲ್ಲೂಕಿನ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ಆರ್ಡಿಪಿಆರ್ ಅನುದಾನದಡಿ ₹2 ಕೋಟಿ ವೆಚ್ಚದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಅಂಕೋನಹಳ್ಳಿ, ನಲ್ಲಗಾನಹಳ್ಳಿ, ಅರಸನಹಳ್ಳಿ, ಬೆಟ್ಟಹಳ್ಳಿ, ಗಿಡ್ಡಪ್ಪನಹಳ್ಳಿ, ವಳಗೆರೆಪುರ, ಸಾದಪ್ಪನಹಳ್ಳಿ, ಅತ್ತಿಬೆಲೆ, ಹಸಿಗಾಳ, ಸೊಣ್ಣಹಳ್ಳಿಪುರ, ತಿಮ್ಮಸಂದ್ರ ಗ್ರಾಮಗಳಲ್ಲಿ ತಲಾ ₹20 ಲಕ್ಷ ವೆಚ್ಚದ ಸಿ.ಸಿ ರಸ್ತೆ ಮತ್ತು ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>ಬಿ.ಎನ್.ಗೋಪಾಲಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಎಂ.ಬಿ.ವೆಂಕಟೇಶ್, ನಾರಾಯಣಗೌಡ, ಅಕ್ಬರ್ ಅಲಿಖಾನ್, ಸುರೇಶ್, ಅತ್ತಿಬೆಲೆ ನಾಗೇಶ್, ಬಸವರಾಜ್, ಅರಸನಹಳ್ಳಿ ಶಿವಣ್ಣ, ಡಿ.ಸಿ ಲಕ್ಷ್ಮಿ, ಲಾರಿ ಕೃಷ್ಣಪ್ಪ, ಕೃಷ್ಣಪ್ಪ, ಸೋಮಶೇಖರ್, ಪಿಳ್ಳೆಗೌಡ, ಅಶ್ವಥ್, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>