<p>ಪ್ರಜಾವಾಣಿ ವಾರ್ತೆ</p>.<p><strong>ಹೊಸಕೋಟೆ</strong>: ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೂರು ಗ್ರಾಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ಪರಿಶಿಷ್ಟರ ಕುಂದು ಕೊರತೆ ಸಭೆ ನಡೆಯಿತು.</p>.<p>ಸಭೆಯಲ್ಲಿ ನಿವೇಶನ ಹಕ್ಕುಪತ್ರ ಕುರಿತು ಚರ್ಚೆ ನಡೆಯಿತು. ಕೆಲ ವರ್ಷಗಳ ಹಿಂದೆ ಸರ್ಕಾರದಿಂದ ಗ್ರಾಮಸ್ಥರಿಗೆ ಖಾಲಿ ನಿವೇಶನ ಹಕ್ಕು ಪತ್ರ ನೀಡಿದ್ದು, ಆ ಜಾಗದಲ್ಲಿ ಗ್ರಾಮಸ್ಥರು ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಇದೀಗ ಖಾಸಗಿ ವ್ಯಕ್ತಿಯೊಬ್ಬ ಈ ಜಾಗದ ಮಾಲಿಕತ್ವದ ತಕರಾರು ತೆಗೆದಿದ್ದಾರೆ. ಮನೆ ತೆರವು ಮಾಡಿವಂತೆ ಒತ್ತಾಯ ಮಾಡುತ್ತಿದ್ದಾರೆ. ಇದಕ್ಕೆ ಒಂದು ಪರಿಹಾರ ನೀಡಬೇಕು ಎಂದು ಶಾಸಕರಲ್ಲಿ ಗ್ರಾಮಸ್ಥರು ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಶರತ್ ಬಚ್ಚೇಗೌಡ, ‘ಕಂದಾಯ ಅಧಿಕಾರಿಗಳಿಂದ ಸಮಸ್ಯೆ ಕುರಿತು ಮಾಹಿತಿ ಪಡೆದಿದ್ದೇನೆ. ಎ.ಸಿ ಅವರೊಂದಿಗೆ ಸಭೆ ನೆಡೆಸಿ, ತೀರ್ಮಾನ ಕೈಗೊಳ್ಳಲಾಗುವುದು. ಆದಷ್ಟು ಬೇಗ ಸಮಸ್ಯೆ ಇತ್ಯರ್ಥಪಡಿಸಿಕೊಡಲಾವುದು ಎಂದರು.</p>.<p>‘ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಬೇಕು ಎಂಬ ಮನವಿ ಬಂದಿದೆ. ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ನಿವೇಶನ ನೀಡುವ ಪ್ರಸ್ತಾವನೆ ಇದೆ. ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಾಗದಲ್ಲಿ ಸರ್ಕಾರಿ ಜಮೀನು ಗುರುತಿಸಲು ಸೂಚಿಸಿದ್ದೇವೆ. ಆ ನಂತರ ಗ್ರಾಮ ಪಂಚಾಯತಿಯಿಂದ ಆರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡುವ ಭರವಸೆ ನೀಡಿದರು.</p>.<p>ತಾ.ಪಂ ಇಒ ಸಿ.ಎನ್.ನಾರಾಯಣಸ್ವಾಮಿ, ಕಂದಾಯಾಧಿಕಾರಿ ಪ್ರಕಾಶ್, ಗ್ರಾಮ ಲೆಕ್ಕಿಗ ಮುರಳಿ ರಾಮಲಿಂಗ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಹೊಸಕೋಟೆ</strong>: ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೂರು ಗ್ರಾಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ಪರಿಶಿಷ್ಟರ ಕುಂದು ಕೊರತೆ ಸಭೆ ನಡೆಯಿತು.</p>.<p>ಸಭೆಯಲ್ಲಿ ನಿವೇಶನ ಹಕ್ಕುಪತ್ರ ಕುರಿತು ಚರ್ಚೆ ನಡೆಯಿತು. ಕೆಲ ವರ್ಷಗಳ ಹಿಂದೆ ಸರ್ಕಾರದಿಂದ ಗ್ರಾಮಸ್ಥರಿಗೆ ಖಾಲಿ ನಿವೇಶನ ಹಕ್ಕು ಪತ್ರ ನೀಡಿದ್ದು, ಆ ಜಾಗದಲ್ಲಿ ಗ್ರಾಮಸ್ಥರು ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಇದೀಗ ಖಾಸಗಿ ವ್ಯಕ್ತಿಯೊಬ್ಬ ಈ ಜಾಗದ ಮಾಲಿಕತ್ವದ ತಕರಾರು ತೆಗೆದಿದ್ದಾರೆ. ಮನೆ ತೆರವು ಮಾಡಿವಂತೆ ಒತ್ತಾಯ ಮಾಡುತ್ತಿದ್ದಾರೆ. ಇದಕ್ಕೆ ಒಂದು ಪರಿಹಾರ ನೀಡಬೇಕು ಎಂದು ಶಾಸಕರಲ್ಲಿ ಗ್ರಾಮಸ್ಥರು ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಶರತ್ ಬಚ್ಚೇಗೌಡ, ‘ಕಂದಾಯ ಅಧಿಕಾರಿಗಳಿಂದ ಸಮಸ್ಯೆ ಕುರಿತು ಮಾಹಿತಿ ಪಡೆದಿದ್ದೇನೆ. ಎ.ಸಿ ಅವರೊಂದಿಗೆ ಸಭೆ ನೆಡೆಸಿ, ತೀರ್ಮಾನ ಕೈಗೊಳ್ಳಲಾಗುವುದು. ಆದಷ್ಟು ಬೇಗ ಸಮಸ್ಯೆ ಇತ್ಯರ್ಥಪಡಿಸಿಕೊಡಲಾವುದು ಎಂದರು.</p>.<p>‘ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಬೇಕು ಎಂಬ ಮನವಿ ಬಂದಿದೆ. ಬಸವ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ನಿವೇಶನ ನೀಡುವ ಪ್ರಸ್ತಾವನೆ ಇದೆ. ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಾಗದಲ್ಲಿ ಸರ್ಕಾರಿ ಜಮೀನು ಗುರುತಿಸಲು ಸೂಚಿಸಿದ್ದೇವೆ. ಆ ನಂತರ ಗ್ರಾಮ ಪಂಚಾಯತಿಯಿಂದ ಆರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡುವ ಭರವಸೆ ನೀಡಿದರು.</p>.<p>ತಾ.ಪಂ ಇಒ ಸಿ.ಎನ್.ನಾರಾಯಣಸ್ವಾಮಿ, ಕಂದಾಯಾಧಿಕಾರಿ ಪ್ರಕಾಶ್, ಗ್ರಾಮ ಲೆಕ್ಕಿಗ ಮುರಳಿ ರಾಮಲಿಂಗ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>