<p>ಹೊಸಕೋಟೆ: ಸೂಲಿಬೆಲೆ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆಶಾ ಕಾರ್ಯಕರ್ತೆಯರ ಸಹಯೋಗದಲ್ಲಿ ಸೂಲಿಬೆಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.</p>.<p>ಈ ವೇಳೆ ಮಾತನಾಡಿದ ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್, ವಾತಾವರಣ ವೈಪರೀತ್ಯದಿಂದ ಉಂಟಾಗುವ ಚಳಿ ಮತ್ತು ಜ್ವರ ಲಕ್ಷಣ ಕಂಡು ಬಂದರೆ ಕೂಡಲೇ ವೈದ್ಯಕೀಯ ಪರೀಕ್ಷೆ ಒಳಗಾಗಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.</p>.<p>ಮಳೆಯಿಂದಾಗಿ ನಿಂತ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಳವಾಗಿದೆ. ಚಿಕುನ್ ಗುನ್ಯ, ಡೆಂಗಿ ಅಂತಹ ಮತ್ತಿತರ ಸಾಂಕ್ರಾಮಿಕ ರೋಗ ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ನಿರ್ಲಕ್ಷ್ಯ ತೋರದೆ ತುರ್ತು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.</p>.<p>ಸಿಮೆಂಟ್ ತೊಟ್ಟಿ, ಪ್ಲಾಸ್ಟಿಕ್ ಡ್ರಂ, ಬಕೆಟ್, ಬ್ಯಾರಲ್, ಖಾಲಿ ಡಬ್ಬ ಮತ್ತು ಹಳೆಯ ಟೈರಗಳಲ್ಲಿ ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳಿಂದ ಹೆಚ್ಚಿನ ಅಪಾಯವಿದ್ದು, ಮನೆಗಳ ಬಳಿ ಈ ರೀತಿಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕೆಂದು ಸಲಹೆ ನೀಡಿದರು.</p>.<p>ಅಯುಷ್ ವೈದ್ಯೆ ಡಾ.ಸಂಧ್ಯಾ, ಪ್ರಭಾವತಿ, ಬಾಲಾಜಿ, ವೆಂಕಟೇಶ್, ಹೊನ್ನನಾಗಮ್ಮ, ಕವಿತಾ, ಕಾಳಮ್ಮ, ಕರೆಬಸಮ್ಮ, ಸುಕನ್ಯಾ, ಶಿಲ್ಪಾ, ಮುನಿರತ್ನ, ಶ್ಯಾಮಲ, ರತ್ನಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ಸೂಲಿಬೆಲೆ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆಶಾ ಕಾರ್ಯಕರ್ತೆಯರ ಸಹಯೋಗದಲ್ಲಿ ಸೂಲಿಬೆಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.</p>.<p>ಈ ವೇಳೆ ಮಾತನಾಡಿದ ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್, ವಾತಾವರಣ ವೈಪರೀತ್ಯದಿಂದ ಉಂಟಾಗುವ ಚಳಿ ಮತ್ತು ಜ್ವರ ಲಕ್ಷಣ ಕಂಡು ಬಂದರೆ ಕೂಡಲೇ ವೈದ್ಯಕೀಯ ಪರೀಕ್ಷೆ ಒಳಗಾಗಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.</p>.<p>ಮಳೆಯಿಂದಾಗಿ ನಿಂತ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಳವಾಗಿದೆ. ಚಿಕುನ್ ಗುನ್ಯ, ಡೆಂಗಿ ಅಂತಹ ಮತ್ತಿತರ ಸಾಂಕ್ರಾಮಿಕ ರೋಗ ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ನಿರ್ಲಕ್ಷ್ಯ ತೋರದೆ ತುರ್ತು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.</p>.<p>ಸಿಮೆಂಟ್ ತೊಟ್ಟಿ, ಪ್ಲಾಸ್ಟಿಕ್ ಡ್ರಂ, ಬಕೆಟ್, ಬ್ಯಾರಲ್, ಖಾಲಿ ಡಬ್ಬ ಮತ್ತು ಹಳೆಯ ಟೈರಗಳಲ್ಲಿ ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳಿಂದ ಹೆಚ್ಚಿನ ಅಪಾಯವಿದ್ದು, ಮನೆಗಳ ಬಳಿ ಈ ರೀತಿಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕೆಂದು ಸಲಹೆ ನೀಡಿದರು.</p>.<p>ಅಯುಷ್ ವೈದ್ಯೆ ಡಾ.ಸಂಧ್ಯಾ, ಪ್ರಭಾವತಿ, ಬಾಲಾಜಿ, ವೆಂಕಟೇಶ್, ಹೊನ್ನನಾಗಮ್ಮ, ಕವಿತಾ, ಕಾಳಮ್ಮ, ಕರೆಬಸಮ್ಮ, ಸುಕನ್ಯಾ, ಶಿಲ್ಪಾ, ಮುನಿರತ್ನ, ಶ್ಯಾಮಲ, ರತ್ನಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>