<p>ಅನುಗೊಂಡನಹಳ್ಳಿ (<strong>ಹೊಸಕೋಟೆ</strong>): ಗೋವಿಂದಪುರದಲ್ಲಿ ಸೋಮವಾರ ಹಣಕಾಸಿನ ಮನಸ್ತಾಪದಿಂದ ಅಣ್ಣನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಹೊದ ತಮ್ಮ ತನ್ನ ಮೈ, ಕೈ ಸುಟ್ಟುಕೊಂಡಿದ್ದಾನೆ. </p>.<p>ಅಣ್ಣ ರಾಮಕೃಷ್ಣ ಮನೆ ಮೇಲೆ ತಮ್ಮ ಮುನಿರಾಜು ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ವೇಳೆ ಕೈಯಲ್ಲಿದ್ದ ಪೆಟ್ರೋಲ್ ಡಬ್ಬಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿತು.</p>.<p>ಮುನಿರಜು ಚೀರಾಟ ಕೇಳಿದ ಕೂಡಲೇ ಅಕ್ಕಪಕ್ಕದ ಮನೆಯವರು ಸಹಾಯಕ್ಕೆ ಧಾವಿಸಿದ್ದಾರೆ. ಮುಖ,ಕೈ, ಕಾಲಿಗೆ ತೀವ್ರ ಸುಟ್ಟು ಗಾಯಗಳಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಗೆ ಕಿಟಿಕಿಗೆ ಸ್ವಲ್ಪ ಹಾನಿಯಾಗಿದೆ.</p>.<p>8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸುತ್ತಿದ್ದ ಮುನಿರಾಜು ಅರ್ಥಿಕ ನಷ್ಟ ಅನುಭವಿಸಿದ್ದರು. ಚೀಟಿ ಹಾಕಿದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ್ದರು. ಇದರಿಂದಾಗಿ ಜಮೀನು ಮಾರಿ ಕುಟುಂಬದವರು ಹಣ ನೀಡಿದ್ದರು. ಆದರೆ, ಆ ಹಣ ಸಾಕಾಗದ ಕಾರಣ ಉಳಿದ ಜಮೀನನ್ನೂ ಮಾರಾಟ ಮಾಡಿ ಹೆಚ್ಚಿನ ನೀಡುವಂತೆ ಮುನಿರಾಜು ಕೇಳಿದ್ದರು.</p>.<p>ಇರೋ ಅಲ್ಪಸ್ವಲ್ಪ ಜಮೀನು ಮಾರಾಟ ಮಾಡಲ್ಲ ಎಂದು ಅಣ್ಣ ರಾಮಕೃಷ್ಣ ಸ್ಪಷ್ಟವಾಗಿ ಹೇಳಿದ್ದರು. ಇದರಿಂದಾಗಿ ಅಣ್ಣ, ತಮ್ಮಂದಿರ ನಡುವೆ ಮನಸ್ತಾಪ ಉಂಟಾಗಿತ್ತು.</p>.<p>ರಾಮಕೃಷ್ಣ ಕುಟುಂಬ ಮನೆಯಲ್ಲಿ ಮಲಗಿದ್ದಾಗ ಮುನಿರಾಜು ಮನೆಯ ಬಾಗಿಲಿನ ಚಿಲಕ ಹಾಕಿ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದರು. ಈ ವೇಳೆ ಅವಘಡ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅನುಗೊಂಡನಹಳ್ಳಿ (<strong>ಹೊಸಕೋಟೆ</strong>): ಗೋವಿಂದಪುರದಲ್ಲಿ ಸೋಮವಾರ ಹಣಕಾಸಿನ ಮನಸ್ತಾಪದಿಂದ ಅಣ್ಣನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಹೊದ ತಮ್ಮ ತನ್ನ ಮೈ, ಕೈ ಸುಟ್ಟುಕೊಂಡಿದ್ದಾನೆ. </p>.<p>ಅಣ್ಣ ರಾಮಕೃಷ್ಣ ಮನೆ ಮೇಲೆ ತಮ್ಮ ಮುನಿರಾಜು ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ವೇಳೆ ಕೈಯಲ್ಲಿದ್ದ ಪೆಟ್ರೋಲ್ ಡಬ್ಬಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿತು.</p>.<p>ಮುನಿರಜು ಚೀರಾಟ ಕೇಳಿದ ಕೂಡಲೇ ಅಕ್ಕಪಕ್ಕದ ಮನೆಯವರು ಸಹಾಯಕ್ಕೆ ಧಾವಿಸಿದ್ದಾರೆ. ಮುಖ,ಕೈ, ಕಾಲಿಗೆ ತೀವ್ರ ಸುಟ್ಟು ಗಾಯಗಳಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಗೆ ಕಿಟಿಕಿಗೆ ಸ್ವಲ್ಪ ಹಾನಿಯಾಗಿದೆ.</p>.<p>8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸುತ್ತಿದ್ದ ಮುನಿರಾಜು ಅರ್ಥಿಕ ನಷ್ಟ ಅನುಭವಿಸಿದ್ದರು. ಚೀಟಿ ಹಾಕಿದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ್ದರು. ಇದರಿಂದಾಗಿ ಜಮೀನು ಮಾರಿ ಕುಟುಂಬದವರು ಹಣ ನೀಡಿದ್ದರು. ಆದರೆ, ಆ ಹಣ ಸಾಕಾಗದ ಕಾರಣ ಉಳಿದ ಜಮೀನನ್ನೂ ಮಾರಾಟ ಮಾಡಿ ಹೆಚ್ಚಿನ ನೀಡುವಂತೆ ಮುನಿರಾಜು ಕೇಳಿದ್ದರು.</p>.<p>ಇರೋ ಅಲ್ಪಸ್ವಲ್ಪ ಜಮೀನು ಮಾರಾಟ ಮಾಡಲ್ಲ ಎಂದು ಅಣ್ಣ ರಾಮಕೃಷ್ಣ ಸ್ಪಷ್ಟವಾಗಿ ಹೇಳಿದ್ದರು. ಇದರಿಂದಾಗಿ ಅಣ್ಣ, ತಮ್ಮಂದಿರ ನಡುವೆ ಮನಸ್ತಾಪ ಉಂಟಾಗಿತ್ತು.</p>.<p>ರಾಮಕೃಷ್ಣ ಕುಟುಂಬ ಮನೆಯಲ್ಲಿ ಮಲಗಿದ್ದಾಗ ಮುನಿರಾಜು ಮನೆಯ ಬಾಗಿಲಿನ ಚಿಲಕ ಹಾಕಿ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದರು. ಈ ವೇಳೆ ಅವಘಡ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>