ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಸಾವು

ಜಾರಿಬಿದ್ದ ಮಗಳ ರಕ್ಷಣೆಗೆ ಹೋದ ಪೋಷಕರೂ ಸಾವು
Published 3 ಮಾರ್ಚ್ 2024, 16:08 IST
Last Updated 3 ಮಾರ್ಚ್ 2024, 16:08 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ಕರಿಬೀರನ ಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ ತಾಯಿ–ತಂದೆ ಸೇರಿದಂತೆ ಮೂವರೂ ಮೃತಪಟ್ಟಿದ್ದಾರೆ.

ಮರಿಯಪ್ಪ(70), ಮುನಿಯಮ್ಮ(60) ಮತ್ತು ದಂಪತಿ ಪುತ್ರಿ ಭಾರತಿ(40) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 

ಕೈತೊಳೆಯಲು ಕೃಷಿ ಹೊಂಡಕ್ಕೆ ಹೋದ ಮಗಳು ಭಾರತಿ ಜಾರಿ ಬಿದ್ದು, ಮುಳಗುತ್ತಿರುವುದನ್ನು ಗಮನಿಸಿದ ಆಕೆ ತಂದೆ ಮರಿಯಪ್ಪ ಮತ್ತು ತಾಯಿ ಮುನಿಯಮ್ಮ ಮಗಳನ್ನು ರಕ್ಷಿಸಲು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಕೆರೆಯಲ್ಲಿ ಹೂಳು ತುಂಬಿದ್ದರಿಂದ ಮೂವರು ಹೊರಬರಲಾಗದೆ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಮೃತರ ಸಂಬಂಧಿಕರು ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT