<p><strong>ಸೂಲಿಬೆಲೆ(ಹೊಸಕೋಟೆ):</strong> ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿರುವ ಮಹಿಳೆಯರಿಗೆ ಸಾಂತ್ವಾನ ಕೇಂದ್ರದ ಮೂಲಕ ಅತ್ಮಸ್ಥರ್ಯ ತುಂಬಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕೌಟುಂಬಿಕವಾಗಿ ದೌರ್ಜನ್ಯ ಮತ್ತು ಹೊಂದಾಣಿಕೆ ಸಮಸ್ಯೆ ಎದುರಾದ ಸಮಯದಲ್ಲಿ ಒಂದುಗೂಡಿಸುವುದು ಆಧ್ಯತೆಯಾಗಿದೆ ಎಂದು ಸಮಾಜಿಕ ಕಾರ್ಯಕರ್ತೆ ರಮ್ಯಾ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ, ಸಾಂತ್ವನ ಮಹಿಳಾ ಸಹಾಯವಾಣಿ ಸಹಯೋಗದಲ್ಲಿ ಗುರುವಾರ ತಾಲ್ಲೂಕಿನ ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಹಿಳೆ ಮತ್ತು ಮಕ್ಕಳ ರಕ್ಷಣೆಯ ಕುರಿತು ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಮುಖಾಮುಖಿ ಆಪ್ತ ಸಮಾಲೋಚನೆ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಸಂಕಷ್ಟದಲ್ಲಿರುವ ಮಹಿಳೆಯರಿಗೆ ಅಶ್ರಯ ನೀಡುವ ಸಲುವಾಗಿ ತಾಲ್ಲೂಕು ಮಟ್ಟದಲ್ಲಿ ‘ಸಾದರ ಕೇಂದ್ರ’ ಹಾಗೂ ಜಿಲ್ಲಾ ಮಟ್ಟದಲ್ಲಿ ‘ಸಖಿ ಕೇಂದ್ರ’ದಲ್ಲಿ ಆಶ್ರಯ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ಪಿ.ಸಂಗೀತಾ, ಹಲವು ಮಹನೀಯರ ಹೋರಾಟದ ಫಲವಾಗಿ ದೇಶದಲ್ಲಿ ಮಹಿಳೆ ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಇದೇ ಹಾದಿಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಜ್ಞಾನ ಸಂಪಾದಿಸಿ ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರೇಣುಕಾ ಕೌಚಗೇರಿ, ವಿದ್ಯಾರ್ಥಿಗಳು ದೇಶದ ಆಸ್ತಿ. ವಿದ್ಯಾರ್ಥಿ ದಿಸೆಯಲ್ಲೇ ತಾವು ಸಾಮಾಜಿಕ ಜವಾಬ್ದಾರಿ ನಿಭಾಯಿಸುವ ರಾಯಭಾರಿಗಳಾಗಬೇಕು. ದೇಶದ ಗೌರವ ಘನತೆಯನ್ನು ಎತ್ತಿ ಹಿಡಿಯುವ ಕಾನೂನು ಮತ್ತು ಕಾಯ್ದೆಗಳನ್ನು ಗೌರವಿಸುವ ಕೆಲಸವಾಗಬೇಕು ಎಂದರು.</p>.<p>ಸರ್ವೋದಯ ಆಶ್ರಯ ಕೇಂದ್ರದ ಸಮಾಜಿಕ ಕಾರ್ಯಕರ್ತೆ ನಾಗವೇಣಿ, ಪೋಲಿಸ್ ಇಲಾಖೆಯ ಬಸಪ್ಪ, ಮೈತ್ರಿ ಮಾತನಾಡಿದರು.</p>.<p>ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಬೆಟ್ಟಹಳ್ಳಿ ಗೋಪಿನಾಥ್, ಕಾಲೇಜಿನ ಪ್ರಾಧ್ಯಾಪಕ ವರ್ಗ ಹಾಜರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ(ಹೊಸಕೋಟೆ):</strong> ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿರುವ ಮಹಿಳೆಯರಿಗೆ ಸಾಂತ್ವಾನ ಕೇಂದ್ರದ ಮೂಲಕ ಅತ್ಮಸ್ಥರ್ಯ ತುಂಬಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕೌಟುಂಬಿಕವಾಗಿ ದೌರ್ಜನ್ಯ ಮತ್ತು ಹೊಂದಾಣಿಕೆ ಸಮಸ್ಯೆ ಎದುರಾದ ಸಮಯದಲ್ಲಿ ಒಂದುಗೂಡಿಸುವುದು ಆಧ್ಯತೆಯಾಗಿದೆ ಎಂದು ಸಮಾಜಿಕ ಕಾರ್ಯಕರ್ತೆ ರಮ್ಯಾ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ, ಸಾಂತ್ವನ ಮಹಿಳಾ ಸಹಾಯವಾಣಿ ಸಹಯೋಗದಲ್ಲಿ ಗುರುವಾರ ತಾಲ್ಲೂಕಿನ ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಹಿಳೆ ಮತ್ತು ಮಕ್ಕಳ ರಕ್ಷಣೆಯ ಕುರಿತು ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಮುಖಾಮುಖಿ ಆಪ್ತ ಸಮಾಲೋಚನೆ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಸಂಕಷ್ಟದಲ್ಲಿರುವ ಮಹಿಳೆಯರಿಗೆ ಅಶ್ರಯ ನೀಡುವ ಸಲುವಾಗಿ ತಾಲ್ಲೂಕು ಮಟ್ಟದಲ್ಲಿ ‘ಸಾದರ ಕೇಂದ್ರ’ ಹಾಗೂ ಜಿಲ್ಲಾ ಮಟ್ಟದಲ್ಲಿ ‘ಸಖಿ ಕೇಂದ್ರ’ದಲ್ಲಿ ಆಶ್ರಯ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ಪಿ.ಸಂಗೀತಾ, ಹಲವು ಮಹನೀಯರ ಹೋರಾಟದ ಫಲವಾಗಿ ದೇಶದಲ್ಲಿ ಮಹಿಳೆ ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಇದೇ ಹಾದಿಯಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಜ್ಞಾನ ಸಂಪಾದಿಸಿ ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರೇಣುಕಾ ಕೌಚಗೇರಿ, ವಿದ್ಯಾರ್ಥಿಗಳು ದೇಶದ ಆಸ್ತಿ. ವಿದ್ಯಾರ್ಥಿ ದಿಸೆಯಲ್ಲೇ ತಾವು ಸಾಮಾಜಿಕ ಜವಾಬ್ದಾರಿ ನಿಭಾಯಿಸುವ ರಾಯಭಾರಿಗಳಾಗಬೇಕು. ದೇಶದ ಗೌರವ ಘನತೆಯನ್ನು ಎತ್ತಿ ಹಿಡಿಯುವ ಕಾನೂನು ಮತ್ತು ಕಾಯ್ದೆಗಳನ್ನು ಗೌರವಿಸುವ ಕೆಲಸವಾಗಬೇಕು ಎಂದರು.</p>.<p>ಸರ್ವೋದಯ ಆಶ್ರಯ ಕೇಂದ್ರದ ಸಮಾಜಿಕ ಕಾರ್ಯಕರ್ತೆ ನಾಗವೇಣಿ, ಪೋಲಿಸ್ ಇಲಾಖೆಯ ಬಸಪ್ಪ, ಮೈತ್ರಿ ಮಾತನಾಡಿದರು.</p>.<p>ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಬೆಟ್ಟಹಳ್ಳಿ ಗೋಪಿನಾಥ್, ಕಾಲೇಜಿನ ಪ್ರಾಧ್ಯಾಪಕ ವರ್ಗ ಹಾಜರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>