ಇದಕ್ಕೂ ಮುಂಚೆ ತಹಶೀಲ್ದಾರರಾದ ರಮೇಶ್ ಅವರು ಧ್ವಜಾರೋಹಣ ಮಾಡಿದರು. ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಧ್ವಜವಂದನೆ ನೀಡಿದರು. ತಹಶೀಲ್ದಾರರ ಜೊತೆ ನಗರಸಭೆಯ ಅಧ್ಯಕ್ಷ ಹೇಮಂತ್ ಕುಮಾರ್ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯದೇವಯ್ಯ ಭಾಗವಹಿಸಿದ್ದರು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.