<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕು ಕಚೇರಿ ಮುಂದೆ ಬುಧವಾರ ಜನಸಾಮಾನ್ಯರ ವಸತಿ,ಭೂಮಿ ವಂಚಿತರ ಒಕ್ಕೂಟ ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ಬಾಬುಜಗಜೀವನ್ರಾಂ ಒಕ್ಕೂಟ, ಜನಪರ ಹೋರಾಟಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.</p>.<p>ನಿವೇಶನ ರಹಿತ ಕಡುಬಡವ ಫನಾನುಭವಿಗಳನ್ನು ಗುರುತಿಸಿ ನಿವೇಶನ ಮಂಜೂರು ಮಾಡಬೇಕು. ಮನೆ ಇಲ್ಲದವರಿಗೆ ಮನೆ ಮಂಜೂರು ಹಾಗೂ ಬಡ ರೈತರಿಗೆ ಸಾಗುವಳಿ ಚೀಟಿಗಳನ್ನು ತಾಲ್ಲೂಕು ಆಡಳಿತ ಶೀಘ್ರವೇ ನೀಡಬೇಕು ಎಂದು ಜನಪರ ಒಕ್ಕೂಟಗಳ ಅಧ್ಯಕ್ಷ ಜಿ.ನಂಜುಂಡಪ್ಪ ಆಗ್ರಹಿಸಿದರು.</p>.<p>ತಾಲ್ಲೂಕಿನಲ್ಲಿ ಅತಿ ಹೆಚ್ಚು ದಲಿತರು, ಹಿಂದುಳಿದ ವರ್ಗದವರು ವಾಸಿಸುತ್ತಿದ್ದಾರೆ. ಹಲವು ಭಾಗದಲ್ಲಿ ವಸತಿ ಇಲ್ಲದೆ ಒಂದೇ ಗುಡಿಸಲಿನಲ್ಲಿ 5 ರಿಂದ 10 ಮಂದಿ ಕುಟುಂಬಸ್ಥರು ವಾಸ ಮಾಡುತ್ತಿದ್ದಾರೆ. ನಿರಾಶ್ರಿತರಿಗೆ ನಿವೇಶನ ಮಂಜೂರು ಮಾಡುತ್ತಿಲ್ಲ. ರೈತರಿಗೆ ಸಾಗುವಳಿ ಚೀಟಿಗೆ ಅರ್ಹರಿದ್ದರೂ ಹತ್ತಾರು ವರ್ಷಗಳಿಂದ ವಿತರಣೆ ಮಾಡಿಲ್ಲ, ಶೀಘ್ರವಾಗಿ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಮುನಿರಾಜು, ಉಪಾಧ್ಯಕ್ಷ ಕೆ.ಜಯರಾಂ, ಮುಖಂಡರಾದ ರಂಗಪ್ಪ, ಗಂಗಾಧಾರ್, ಮೇಘರಾಜು, ರಮೇಶ್,ಶಂಕರ್, ರಾಮ್ ಕುಮಾರ್, ಲಕ್ಷ್ಮಮ್ಮ ಇದ್ದರು.</p>.<h2> ಹಕ್ಕೋತ್ತಾಯ </h2><ul><li><p>ನಿರಾಶ್ರಿತರಿಗೆ ವಸತಿ ಕಲ್ಪಿಸಲು ಸರ್ಕಾರ ಕೂಡಲೇ ಜಮೀನು ನೀಡಬೇಕು. </p></li><li><p>ಸರ್ಕಾರ ನಿರ್ಮಿಸಿರುವ ಬಡಾವಣೆಗಳಲ್ಲಿ ನಿರಾಶ್ರಿತರನ್ನು ಕಡೆಗಣಿಸಿ ಉಳ್ಳವರಿಗೆ ನೀಡಿರುವುದನ್ನ ವಾಪಾಸ್ ಪಡೆಯಬೇಕು. </p></li><li><p>ಅರ್ಹ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು. </p></li><li><p>ಸರ್ಕಾರಿ ಸ್ವತ್ತುಗಳನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಳ್ಳಬೇಕು. </p></li><li><p>ಅತಿ ಸಣ್ಣ ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕು ಕಚೇರಿ ಮುಂದೆ ಬುಧವಾರ ಜನಸಾಮಾನ್ಯರ ವಸತಿ,ಭೂಮಿ ವಂಚಿತರ ಒಕ್ಕೂಟ ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ಬಾಬುಜಗಜೀವನ್ರಾಂ ಒಕ್ಕೂಟ, ಜನಪರ ಹೋರಾಟಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.</p>.<p>ನಿವೇಶನ ರಹಿತ ಕಡುಬಡವ ಫನಾನುಭವಿಗಳನ್ನು ಗುರುತಿಸಿ ನಿವೇಶನ ಮಂಜೂರು ಮಾಡಬೇಕು. ಮನೆ ಇಲ್ಲದವರಿಗೆ ಮನೆ ಮಂಜೂರು ಹಾಗೂ ಬಡ ರೈತರಿಗೆ ಸಾಗುವಳಿ ಚೀಟಿಗಳನ್ನು ತಾಲ್ಲೂಕು ಆಡಳಿತ ಶೀಘ್ರವೇ ನೀಡಬೇಕು ಎಂದು ಜನಪರ ಒಕ್ಕೂಟಗಳ ಅಧ್ಯಕ್ಷ ಜಿ.ನಂಜುಂಡಪ್ಪ ಆಗ್ರಹಿಸಿದರು.</p>.<p>ತಾಲ್ಲೂಕಿನಲ್ಲಿ ಅತಿ ಹೆಚ್ಚು ದಲಿತರು, ಹಿಂದುಳಿದ ವರ್ಗದವರು ವಾಸಿಸುತ್ತಿದ್ದಾರೆ. ಹಲವು ಭಾಗದಲ್ಲಿ ವಸತಿ ಇಲ್ಲದೆ ಒಂದೇ ಗುಡಿಸಲಿನಲ್ಲಿ 5 ರಿಂದ 10 ಮಂದಿ ಕುಟುಂಬಸ್ಥರು ವಾಸ ಮಾಡುತ್ತಿದ್ದಾರೆ. ನಿರಾಶ್ರಿತರಿಗೆ ನಿವೇಶನ ಮಂಜೂರು ಮಾಡುತ್ತಿಲ್ಲ. ರೈತರಿಗೆ ಸಾಗುವಳಿ ಚೀಟಿಗೆ ಅರ್ಹರಿದ್ದರೂ ಹತ್ತಾರು ವರ್ಷಗಳಿಂದ ವಿತರಣೆ ಮಾಡಿಲ್ಲ, ಶೀಘ್ರವಾಗಿ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಮುನಿರಾಜು, ಉಪಾಧ್ಯಕ್ಷ ಕೆ.ಜಯರಾಂ, ಮುಖಂಡರಾದ ರಂಗಪ್ಪ, ಗಂಗಾಧಾರ್, ಮೇಘರಾಜು, ರಮೇಶ್,ಶಂಕರ್, ರಾಮ್ ಕುಮಾರ್, ಲಕ್ಷ್ಮಮ್ಮ ಇದ್ದರು.</p>.<h2> ಹಕ್ಕೋತ್ತಾಯ </h2><ul><li><p>ನಿರಾಶ್ರಿತರಿಗೆ ವಸತಿ ಕಲ್ಪಿಸಲು ಸರ್ಕಾರ ಕೂಡಲೇ ಜಮೀನು ನೀಡಬೇಕು. </p></li><li><p>ಸರ್ಕಾರ ನಿರ್ಮಿಸಿರುವ ಬಡಾವಣೆಗಳಲ್ಲಿ ನಿರಾಶ್ರಿತರನ್ನು ಕಡೆಗಣಿಸಿ ಉಳ್ಳವರಿಗೆ ನೀಡಿರುವುದನ್ನ ವಾಪಾಸ್ ಪಡೆಯಬೇಕು. </p></li><li><p>ಅರ್ಹ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು. </p></li><li><p>ಸರ್ಕಾರಿ ಸ್ವತ್ತುಗಳನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಳ್ಳಬೇಕು. </p></li><li><p>ಅತಿ ಸಣ್ಣ ರೈತರ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>