ದೇವನಹಳ್ಳಿ: ‘ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಮತದಾರರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲವೇ ಎಂದು ಕೇಳುತ್ತಿರುವುದು ನನಗೆ ಬೇಸರ ತಂದಿದೆ. ಈಗಾಗಲೇ, ಎರಡು ಬಾರಿ ಶಾಸಕನಾಗಿ ಕೆಲಸ ಮಾಡಿರುವ ನಾನು ಕೂಡ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ’ ಎಂದು ಮಾಜಿ ಶಾಸಕ ಜಿ. ಚಂದ್ರಣ್ಣ ತಿಳಿಸಿದರು.