ಬಿಜೆಪಿಗರು ಸುಳ್ಳುಬುರುಕರು. ಮೊದಲಿನಿಂದಲೂ ಅವರಿಗೆ ಸಂವಿಧಾನದ ಬಗ್ಗೆ ಅಸೂಯೆ, ದ್ವೇಷ ಇದ್ದೇ ಇದೆ. ಅದನ್ನ ಈಗ ಈಡೇರಿಸಿಕೊಳ್ಳಲು ಹೊರಟ್ಟಿದ್ದಾರೆ. ದಲಿತರು, ಅಲ್ಪಸಂಖ್ಯಾತರು ಉದ್ಧಾರ ಆಗುವುದನ್ನು ಸಹಿಸದೆ ಮೀಸಲಾತಿಯನ್ನು ದ್ವೇಷ ಮಾಡುತ್ತಿದ್ದಾರೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ದಲಿತರು, ಅಲ್ಪಸಂಖ್ಯಾತರು, ಆದಿವಾಸಿಗಳು ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ ಎಂದು ಅವರು ಎಚ್ಚರಿಸಿದರು.