‘ಯಾವುದೇ ಪ್ರಾಧಿಕಾರದ ಅನುಮತಿ ಇಲ್ಲದೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. ಇದನ್ನು ತಡೆದು, ಮನೆ ನಿರ್ಮಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಸಂಬಂಧ ಭೂ ಸಂರಕ್ಷಣಾ ಸದನ ಸಮಿತಿಯಲ್ಲೂ ಚರ್ಚೆಯಾಗಿದೆ. ಹೀಗಾಗಿ ತೆರವಿಗೆ ಕ್ರಮ ಕೈಗೊಳ್ಳಲು ತಹಶೀಲ್ದಾರ್ಗಳಿಗೆ ಅಧಿಕಾರ ನೀಡಲಾಗಿದೆ’ ಎಂದು ಗ್ರಾಮಾಂತರ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.