‘ದಾಳಿ ನಡೆಸಲು ಪೊಲೀಸರು ಮನೆಯ ಬಳಿ ಬರುತ್ತಿದ್ದಂತೆ ಸುರೇಶ್ ತಪ್ಪಿಸಿಕೊಂಡಿದ್ದಾನೆ. ಮನೆಯಲ್ಲಿನ ಶೌಚಾಲಯ, ಚರಂಡಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಮದ್ಯದ ಬಾಟಲಿಗಳನ್ನು ದಾಸ್ತಾನು ಮಾಡಿದ್ದ. ಈ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಪೊಲೀಸರು ದಾಳಿ ಮಾಡಿ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಗಾಂಧಿ ಜಯಂತಿ ದಿನವಾದ ಬುಧವಾರ ಬಾರ್ಗಳು ಬಂದ್ ಆಗಿದ್ದವು. ಇದರಿಂದಾಗಿ ಸುರೇಶ್ ಮನೆಯಲ್ಲಿ ವ್ಯಾಪಾರ ಭರದಿಂದ ನಡೆಯುತ್ತಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.