ಮುದುಗುರ್ಕಿ ಗ್ರಾಮದ ಬಳಿಯಿರುವ ಕಲ್ಲುಬಂಡೆ ಗುಡ್ಡದಲ್ಲಿ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ಇದರಿಂದ ಸುತ್ತಲು ಕೃಷಿ ಚಟುವಟಿಕೆ ನಡೆಸಲು ತೊಂದರೆ ಆಗಿದೆ. ಸರ್ವೇ ನಂಬರ್ 31, 32, 20, 21 ಭೂಮಿ ಕಲ್ಲಿನ ಗುಡ್ಡಕ್ಕೆ ಹೊಂದಿಕೊಂಡಿದೆ. ಗಣಿಗಾರಿಕೆ ನಡೆಸುವ ಉದ್ದೇಶದಿಂದ ಸಿಡಿಮದ್ದು ಸಿಡಿಸಲಾಗುತ್ತಿದೆ. ಗುಡ್ಡದ ಮೇಲೆ ಕರಗದಮ್ಮ ದೇವಾಲಯ ಇದ್ದು ಬಿದ್ದುಹೋಗುವ ಸಂಭವವಿದೆ. ಜಿಲ್ಲಾಧಿಕಾರಿ, ಶಾಸಕರು ಸೇರಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.