ಈ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ಮೋಹನಕುಮಾರಿ, ಸರ್ಕಾರಿ ಭೂಮಿಯಲ್ಲಿ ಬಂಡೆಗಳನ್ನು ಒಡೆದು ಖಾಸಗಿ ಉದ್ದೇಶಗಳಿಗೆ ಬಳಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಹೀಗಾಗಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಮಾಲೀಕರ ಬಳಿಯಿರುವ ದಾಖಲೆ ಪರಿಶೀಲಿಸಿ ದೂರು ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.