<p><strong>ವಿಜಯಪುರ</strong>:ದೇವನಹಳ್ಳಿ ಪಟ್ಟಣದಲ್ಲಿ ನಿರ್ಮಾಣ ಮಾಡಿರುವ ಬಿಎಂಟಿಸಿ ಬಸ್ ಡಿಪೊ ಕಟ್ಟಡವನ್ನು ಉದ್ಘಾಟಿಸಿ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಬೆಂಗಳೂರಿನ ವಿಕಾಸಸೌಧದಲ್ಲಿರುವ ಸಚಿವ ಲಕ್ಷ್ಮಣ್ ಸಂಗಪ್ಪ ಸವದಿ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿರುವ ಅವರು, ಡಿಪೊ ನಿರ್ಮಾಣ ಮಾಡಿ ಹಲವು ವರ್ಷಗಳೇ ಕಳೆದಿದ್ದರೂ ಹಲವಾರು ಕಾರಣಗಳಿಂದಾಗಿ ಉದ್ಘಾಟನೆಗೊಳ್ಳದೆ ನನೆಗುದಿಗೆ ಬಿದ್ದಿದೆ. ಇದರಿಂದ ಈ ಭಾಗದಿಂದ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರು ಸಾರಿಗೆ ಬಸ್ಗಳನ್ನೇ ಅವಲಂಬಿಸಬೇಕಾಗಿದೆ. ಇದರಿಂದಾಗಿ ಸಾರಿಗೆ ಬಸ್ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರು.</p>.<p>ತಾಲ್ಲೂಕಿನಲ್ಲಿ ಎರಡು ಪುರಸಭೆಗಳಿವೆ. ವಿಜಯಪುರ ಪಟ್ಟಣದಲ್ಲಿ ಸಾರಿಗೆ ಇಲಾಖೆಯ ಡಿಪೊ ನಿರ್ಮಾಣಕ್ಕೆ 4 ಎಕರೆ ಭೂಮಿ ಮಂಜೂರು ಮಾಡಿದ್ದು, ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ. ಇದುವರೆಗೂ ಡಿಪೊ ನಿರ್ಮಾಣ ಸಾಧ್ಯವಾಗಿಲ್ಲ. ಇದಕ್ಕೆ ಅನುದಾನ ಬಿಡುಗಡೆ ಮಾಡಿಕೊಡಬೇಕು ಎಂದು ಕೋರಿದರು.</p>.<p>ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿಯೇ ಇರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿಜಯಪುರದಲ್ಲಿ ಹೈಟೆಕ್ ಬಸ್ನಿಲ್ದಾಣ ನಿರ್ಮಾಣ ಮಾಡಬೇಕಾಗಿದೆ ಎಂದು ಮನವಿ ಸಲ್ಲಿಸಿದರು.</p>.<p>ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣಕ್ಕೆ ಹೈಟೆಕ್ ಬಸ್ನಿಲ್ದಾಣವನ್ನು ಮಂಜೂರು ಮಾಡಿ ಅನುದಾನ ಬಿಡುಗಡೆ ಮಾಡಬೇಕು. ಚನ್ನರಾಯಪಟ್ಟಣದ ಸರ್ವೇ ನಂ. 183ರಲ್ಲಿ 5 ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಇಲ್ಲಿಯೇ ಕೌಶಲಾಭಿವೃದ್ಧಿ ಕಾಲೇಜು ನಿರ್ಮಾಣ ಮಾಡಬೇಕು. ಇದರಿಂದ ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:ದೇವನಹಳ್ಳಿ ಪಟ್ಟಣದಲ್ಲಿ ನಿರ್ಮಾಣ ಮಾಡಿರುವ ಬಿಎಂಟಿಸಿ ಬಸ್ ಡಿಪೊ ಕಟ್ಟಡವನ್ನು ಉದ್ಘಾಟಿಸಿ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಬೆಂಗಳೂರಿನ ವಿಕಾಸಸೌಧದಲ್ಲಿರುವ ಸಚಿವ ಲಕ್ಷ್ಮಣ್ ಸಂಗಪ್ಪ ಸವದಿ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿರುವ ಅವರು, ಡಿಪೊ ನಿರ್ಮಾಣ ಮಾಡಿ ಹಲವು ವರ್ಷಗಳೇ ಕಳೆದಿದ್ದರೂ ಹಲವಾರು ಕಾರಣಗಳಿಂದಾಗಿ ಉದ್ಘಾಟನೆಗೊಳ್ಳದೆ ನನೆಗುದಿಗೆ ಬಿದ್ದಿದೆ. ಇದರಿಂದ ಈ ಭಾಗದಿಂದ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರು ಸಾರಿಗೆ ಬಸ್ಗಳನ್ನೇ ಅವಲಂಬಿಸಬೇಕಾಗಿದೆ. ಇದರಿಂದಾಗಿ ಸಾರಿಗೆ ಬಸ್ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರು.</p>.<p>ತಾಲ್ಲೂಕಿನಲ್ಲಿ ಎರಡು ಪುರಸಭೆಗಳಿವೆ. ವಿಜಯಪುರ ಪಟ್ಟಣದಲ್ಲಿ ಸಾರಿಗೆ ಇಲಾಖೆಯ ಡಿಪೊ ನಿರ್ಮಾಣಕ್ಕೆ 4 ಎಕರೆ ಭೂಮಿ ಮಂಜೂರು ಮಾಡಿದ್ದು, ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ. ಇದುವರೆಗೂ ಡಿಪೊ ನಿರ್ಮಾಣ ಸಾಧ್ಯವಾಗಿಲ್ಲ. ಇದಕ್ಕೆ ಅನುದಾನ ಬಿಡುಗಡೆ ಮಾಡಿಕೊಡಬೇಕು ಎಂದು ಕೋರಿದರು.</p>.<p>ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿಯೇ ಇರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿಜಯಪುರದಲ್ಲಿ ಹೈಟೆಕ್ ಬಸ್ನಿಲ್ದಾಣ ನಿರ್ಮಾಣ ಮಾಡಬೇಕಾಗಿದೆ ಎಂದು ಮನವಿ ಸಲ್ಲಿಸಿದರು.</p>.<p>ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣಕ್ಕೆ ಹೈಟೆಕ್ ಬಸ್ನಿಲ್ದಾಣವನ್ನು ಮಂಜೂರು ಮಾಡಿ ಅನುದಾನ ಬಿಡುಗಡೆ ಮಾಡಬೇಕು. ಚನ್ನರಾಯಪಟ್ಟಣದ ಸರ್ವೇ ನಂ. 183ರಲ್ಲಿ 5 ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಇಲ್ಲಿಯೇ ಕೌಶಲಾಭಿವೃದ್ಧಿ ಕಾಲೇಜು ನಿರ್ಮಾಣ ಮಾಡಬೇಕು. ಇದರಿಂದ ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>