ಬೆಂಗಳೂರಿನ ವಿಕಾಸಸೌಧದಲ್ಲಿರುವ ಸಚಿವ ಲಕ್ಷ್ಮಣ್ ಸಂಗಪ್ಪ ಸವದಿ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿರುವ ಅವರು, ಡಿಪೊ ನಿರ್ಮಾಣ ಮಾಡಿ ಹಲವು ವರ್ಷಗಳೇ ಕಳೆದಿದ್ದರೂ ಹಲವಾರು ಕಾರಣಗಳಿಂದಾಗಿ ಉದ್ಘಾಟನೆಗೊಳ್ಳದೆ ನನೆಗುದಿಗೆ ಬಿದ್ದಿದೆ. ಇದರಿಂದ ಈ ಭಾಗದಿಂದ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರು ಸಾರಿಗೆ ಬಸ್ಗಳನ್ನೇ ಅವಲಂಬಿಸಬೇಕಾಗಿದೆ. ಇದರಿಂದಾಗಿ ಸಾರಿಗೆ ಬಸ್ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರು.