<p><strong>ಆನೇಕಲ್:</strong> ‘ಸಹಕಾರ ಕ್ಷೇತ್ರ ಸೇವಾ ಮನೋಭಾವನೆಯ ಕ್ಷೇತ್ರವಾಗಬೇಕು. ಈ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಬೇಕು. ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.</p>.<p>ಅವರು ಪಟ್ಟಣದಲ್ಲಿ ಆನೇಕಲ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಶಾಸಕ ಬಿ.ಶಿವಣ್ಣ ಮಾತನಾಡಿ, ‘ಆನೇಕಲ್ ಪಟ್ಟಣದಲ್ಲಿ ಅತ್ಯಂತ ಹಳೆಯದಾದ ವ್ಯವಸಾಯ ಸೇವಾ ಸಹಕಾರ ಸಂಘ ಇದಾಗಿದ್ದು ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ಮುಂದಿನ ರಾಜಕೀಯ ಹೆಜ್ಜೆಯಾಗಿದೆ. ಹಾಗಾಗಿ ಇಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದರೆ ಅವಕಾಶದ ಬಾಗಿಲುಗಳು ತೆರೆದುಕೊಳ್ಳುತ್ತದೆ’ ಎಂದರು.</p>.<p>ಬಮೂಲ್ ನಿರ್ದೇಶಕ ಬಿ.ಜಿ.ಆಂಜಿನಪ್ಪ ಮಾತನಾಡಿ, ‘5 ಎಕರೆ ಜಮೀ ನನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಕೊಂಡು ಶೀತಲ ಕೇಂದ್ರವನ್ನು ಸ್ಥಾಪಿಸಲು ಪ್ರಯತ್ನ ಮಾಡಲಾಗುವುದು’ ಎಂದರು.</p>.<p>ಆನೇಕಲ್ ತಾಲ್ಲೂಕು ಟಿಎಪಿಸಿ ಎಂಎಸ್ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ. ಸಂಘದ ವತಿಯಿಂದ 5 ಅಂಗಡಿ ಮಳಿಗೆಗಳು, ಸಭಾಂಗಣ ನಿರ್ಮಿಸಲಾಗಿದೆ. ಮಾಸಿಕ ಆದಾಯ ₹1 ಲಕ್ಷ ಬರುವಂತೆ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಸಂಪತ್, ಕರ್ಪೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮಶೇಖರರೆಡ್ಡಿ, ಮುಖಂಡರಾದ ಕೆ.ಎಸ್.ನಟರಾಜ್, ಎನ್.ಬಿ.ಐ. ನಾಗರಾಜು, ಆರ್.ಕೆ. ರಮೇಶ್, ಸಿ.ಕೆ.ಚಿನ್ನಪ್ಪ, ಬಳ್ಳೂರು ಮುನಿವೀರಪ್ಪ, ಹಾ.ವೇ.ವೆಂಕಟೇಶ್, ಜಿ.ನಂಜುಂಡಪ್ಪ, ಹೇಮಲತಾ ಆಂಜಿನಪ್ಪ, ಎಂ.ಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ‘ಸಹಕಾರ ಕ್ಷೇತ್ರ ಸೇವಾ ಮನೋಭಾವನೆಯ ಕ್ಷೇತ್ರವಾಗಬೇಕು. ಈ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಬೇಕು. ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.</p>.<p>ಅವರು ಪಟ್ಟಣದಲ್ಲಿ ಆನೇಕಲ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಶಾಸಕ ಬಿ.ಶಿವಣ್ಣ ಮಾತನಾಡಿ, ‘ಆನೇಕಲ್ ಪಟ್ಟಣದಲ್ಲಿ ಅತ್ಯಂತ ಹಳೆಯದಾದ ವ್ಯವಸಾಯ ಸೇವಾ ಸಹಕಾರ ಸಂಘ ಇದಾಗಿದ್ದು ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ಮುಂದಿನ ರಾಜಕೀಯ ಹೆಜ್ಜೆಯಾಗಿದೆ. ಹಾಗಾಗಿ ಇಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದರೆ ಅವಕಾಶದ ಬಾಗಿಲುಗಳು ತೆರೆದುಕೊಳ್ಳುತ್ತದೆ’ ಎಂದರು.</p>.<p>ಬಮೂಲ್ ನಿರ್ದೇಶಕ ಬಿ.ಜಿ.ಆಂಜಿನಪ್ಪ ಮಾತನಾಡಿ, ‘5 ಎಕರೆ ಜಮೀ ನನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಕೊಂಡು ಶೀತಲ ಕೇಂದ್ರವನ್ನು ಸ್ಥಾಪಿಸಲು ಪ್ರಯತ್ನ ಮಾಡಲಾಗುವುದು’ ಎಂದರು.</p>.<p>ಆನೇಕಲ್ ತಾಲ್ಲೂಕು ಟಿಎಪಿಸಿ ಎಂಎಸ್ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ. ಸಂಘದ ವತಿಯಿಂದ 5 ಅಂಗಡಿ ಮಳಿಗೆಗಳು, ಸಭಾಂಗಣ ನಿರ್ಮಿಸಲಾಗಿದೆ. ಮಾಸಿಕ ಆದಾಯ ₹1 ಲಕ್ಷ ಬರುವಂತೆ ಮಾಡಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಸಂಪತ್, ಕರ್ಪೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮಶೇಖರರೆಡ್ಡಿ, ಮುಖಂಡರಾದ ಕೆ.ಎಸ್.ನಟರಾಜ್, ಎನ್.ಬಿ.ಐ. ನಾಗರಾಜು, ಆರ್.ಕೆ. ರಮೇಶ್, ಸಿ.ಕೆ.ಚಿನ್ನಪ್ಪ, ಬಳ್ಳೂರು ಮುನಿವೀರಪ್ಪ, ಹಾ.ವೇ.ವೆಂಕಟೇಶ್, ಜಿ.ನಂಜುಂಡಪ್ಪ, ಹೇಮಲತಾ ಆಂಜಿನಪ್ಪ, ಎಂ.ಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>