ಯಕ್ಷಗಾನ ಕಲಾವಿದ ಕೆ.ಸಿ. ನಾರಾಯಣ್ ಮಾತನಾಡಿ, ಇಂದಿನ ಯುವಪೀಳಿಗೆ ನಮ್ಮ ಪಾರಂಪರಿಕ ಕಲೆಗಳಾದ ಯಕ್ಷಗಾನ, ನಾಟಕ, ಜನಪದ ಕಲೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕಿದೆ. ಮೂಡಲಪಾಯ ಯಕ್ಷಗಾನದಲ್ಲಿ ದೊಡ್ಡಬಳ್ಳಾಪುರ ಪ್ರಖ್ಯಾತಿ ಪಡೆದಿದೆ. ಇಲ್ಲಿ ಹಲವಾರು ಕಲಾವಿದರಿದ್ದಾರೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.