ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಅಭಿವೃದ್ಧಿಗೆ ಒತ್ತು: ಶಾಸಕ ಶರತ್‌ ಬಚ್ಚೇಗೌಡ

Last Updated 5 ಡಿಸೆಂಬರ್ 2021, 6:07 IST
ಅಕ್ಷರ ಗಾತ್ರ

ಹೊಸಕೋಟೆ:ನಗರದ ಕೆ.ಆರ್‌. ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಟಿಎಪಿಸಿಎಂಎಸ್ ಮಳಿಗೆಗಳನ್ನು ಶಾಸಕ ಶರತ್ ಬಚ್ಚೇಗೌಡ ಶನಿವಾರಉದ್ಘಾಟಿಸಿದರು.

ತಾಲ್ಲೂಕಿನ ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ ರೈತರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುತ್ತಿದೆ. ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ಅದರಿಂದ ಬರುವ ಲಾಭದಿಂದ ರೈತರಿಗೆ ಸಹಾಯ ಯೋಜನೆ ರೂಪಿಸಲು ಮುಂದಾಗಿರುವುದು ಒಳ್ಳೆಯ ಸಂಗತಿ ಎಂದರು.

ಒಂದೇ ಸೂರಿನ ಅಡಿ ರಿಯಾಯಿತಿ ದರದಲ್ಲಿ ಕೃಷಿ ಉತ್ಪನ್ನಗಳು ದೊರೆಯುವಂತೆ ಮಾಡಲಾಗಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಎಲ್ ಅಂಡ್ ಟಿ ಮಂಜುನಾಥ್ ಹೇಳಿದರು.

ಉಪಾಧ್ಯಕ್ಷ ರಮೇಶ್, ನಿರ್ದೇಶಕರಾದ ಸಿ. ಮುನಿಯಪ್ಪ, ಬಾಬುರೆಡ್ಡಿ, ಹನುಮಂತೇಗೌಡ, ಸಂಘದ ಮಾಜಿ ಅಧ್ಯಕ್ಷ ಕೋಡಿಹಳ್ಳಿ ಸೊಣ್ಣಪ್ಪ, ಮುಖಂಡರಾದ ಹುಲ್ಲೂರು ಮಂಜುನಾಥ್, ಭೈರೇಗೌಡಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT