ಪರಿವರ್ತನಾ ಕಲಾ ಸಂಸ್ಥೆಯ ಅಧ್ಯಕ್ಷ, ಕಿರುತೆರೆ ನಟ ಡಾ.ದೇವನಹಳ್ಳಿ ದೇವರಾಜ್ ಮಾತನಾಡಿ, ‘ದಶಕದ ಹಿಂದೆ ಶೇಕಡ 40ರಷ್ಟು ಮಳೆ ನೀರು ಭೂಮಿಯಲ್ಲಿ ಇಂಗುತ್ತಿತ್ತು. ಆದರೆ, ಈಗ ಶೇಕಡ 5ರಷ್ಟು ಕೂಡ ಇಂಗುತ್ತಿಲ್ಲ. ಅರಣ್ಯೀಕರಣ ಮಾಡುವ ಮೂಲಕ ಮಣ್ಣಿನ ಸವಕಳಿ ನಿಯಂತ್ರಿಸುವ ಜೊತೆಗೆ ಅಂತರ್ಜಲ ಹೆಚ್ಚಿಸುವುದು, ಬಾವಿಗಳ ಮರುಪೂರಣ, ಕಲ್ಲುಗುಂಡು ತಡೆ, ಕೆರೆಹೊಂಡಗಳನ್ನು ನಿರ್ಮಾಣ ಮಾಡುವ ಕಡೆಗೆ ಗಮನಹರಿಸಬೇಕು’ ಎಂದರು.