ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ನೀಡುವ ಹಾಲಿನ ದರದಲ್ಲಿ ಹೆಚ್ಚಳ

Last Updated 18 ಜನವರಿ 2021, 1:47 IST
ಅಕ್ಷರ ಗಾತ್ರ

ಹೊಸಕೋಟೆ: ಈ ಹಿಂದೆ ಸಚಿವಾಗಿದ್ದಾಗ ತಾಲ್ಲೂಕಿನಲ್ಲಿ 40 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಿರುವುದಾಗಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ತಾಲ್ಲೂಕಿನ ಹಾಲು ಉತ್ಪಾದಕರ ಸಂಘದ ಆವರಣದಲ್ಲಿ ವಿವಿಧ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದರು. ತಾಲ್ಲೂಕಿನಾದ್ಯಂತ ವಿವಿಧೆಡೆ ಕಾರ್ಖಾನೆ ತೆರೆದು ಸ್ಥಳೀಯರಿಗೆ ಉದ್ಯೋಗ ನೀಡಲಾಗಿದೆ. ಇದರಿಂದ ತಾಲ್ಲೂಕಿನ ಯುವಕರು ಉದ್ಯೋಗ ಅರಸಿ ಬೇರೆಡೆಗೆ ಹೋಗುವುದು ತಪ್ಪಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ, ತಾಲ್ಲೂಕಿನಲ್ಲಿ ಸುಮಾರು ಎಂಟು ಸಾವಿರ ಕುಟುಂಬಗಳು ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿದ್ದು 201 ಡೇರಿಗಳು ಕೆಲಸ ಮಾಡುತ್ತಿವೆ ಎಂದರು.

ದರದಲ್ಲಿ ಹೆಚ್ಚಳ: ಇದೇ ಸಂದರ್ಭದಲ್ಲಿ ಮಾತನಾಡಿದ ಡೇರಿ ಸದಸ್ಯ ಹುಲ್ಲೂರು ಮಂಜುನಾಥ್, ಫೆಬ್ರುವರಿ 1ರಿಂದ ರೈತರು ನೀಡುವ ಹಾಲಿಗೆ ಎರಡು ರೂಪಾಯಿ ಹೆಚ್ಚಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಹಸು ಎತ್ತುವ ಯಂತ್ರಗಳನ್ನು ವಿವಿಧ ಡೇರಿಗಳಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೋಡಿಹಳ್ಳಿ ಸೊಣ್ಣಪ್ಪ, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಎಲ್ ಅಂಡ್ ಟಿ ಮಂಜುನಾಥ್, ಸದಸ್ಯರಾದ ಉಪ್ಪಾರಹಳ್ಳಿ ಮುನಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಮಂಜುನಾಥ್, ಮುಖಂಡರಾದ ಸಿ.ಬೈರೇಗೌಡ, ಗೋಪಾಲಗೌಡ, ಶೇಖರ್ ಗೌಡ,ವಕೀಲ ಮಂಜುನಾಥ್ ಹಾಗೂ ಡೇರಿ ವ್ಯವಸ್ಥಾಪಕ ಶಿವಾಜಿ ನಾಯಕ್,ವಿಸ್ತರಣಾಧಿಕಾರಿ ಶ್ರೀರಾಮ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT