<p><strong>ಆನೇಕಲ್ : </strong>ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ಶಾಸಕ ಬಿ.ಶಿವಣ್ಣ ಭೂಮಿಪೂಜೆ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ಬಡವರಿಗೆ ಹಸಿವು ನೀಗಿಸಲು ಉಪಯುಕ್ತವಾಗಿದೆ. ಬೊಮ್ಮಸಂದ್ರ ಕೈಗಾರಿಕ ಪ್ರದೇಶ ಆಗಿರುವುದರಿಂದ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರಿದ್ದಾರೆ. ಅವರಿಗೆ ಅನುಕೂಲ ಕಲ್ಪಿಸಲು ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.</p>.<p>ಆನೇಕಲ್ ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಇಂದಿರಾ ಕ್ಯಾಂಟಿನ್ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಕ್ಯಾಂಟೀನ್ ನಿರ್ಮಿಸಲಾಗುವುದು ಎಂದು ತಿಳಿಸಿದರು.</p>.<p>ಬೊಮ್ಮಸಂದ್ರ ಕೈಗಾರಿಕ ಪ್ರದೇಶ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗುವುದು. ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ಸಂಪರ್ಕ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಮೆಟ್ರೊ ವಿಸ್ತರಣೆಯಿಂದಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮೆಟ್ರೊ ಪೂರಕವಾಗಲಿದೆ ಎಂದು ತಿಳಿಸಿದರು.</p>.<p>ಬೊಮ್ಮಸಂದ್ರ ಕೈಗಾರಿಕ ಮಾಲೀಕರ ಸಂಘದ ಅಧ್ಯಕ್ಷ ಪ್ರಸಾದ್ ಮಾತನಾಡಿ, ಅಭಿವೃದ್ಧಿಗೆ ಕೈಗಾರಿಕ ಸಂಘ ಬದ್ಧವಾಗಿದೆ. ಕಂಪನಿಗಳ ಸಿಎಸ್ಆರ್ ನಿಧಿಯಡಿಯಲ್ಲಿ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಕೈಗಾರಿಕ ಸಂಘವು ಅಭಿವೃದ್ಧಿಗೆ ಸದಾ ಬೆನ್ನೆಲುಬಾಗಿರುತ್ತದೆ ಎಂದರು.</p>.<p>ಬೊಮ್ಮಸಂದ್ರ ಪುರಸಭೆ ಅಧ್ಯಕ್ಷ ಗೋಪಾಲ್, ಸದಸ್ಯರಾದ ಛಲಪತಿ, ಅಭಿಷೇಕ್, ಮುಖ್ಯಾಧಿಕಾರಿ ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ : </strong>ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ಶಾಸಕ ಬಿ.ಶಿವಣ್ಣ ಭೂಮಿಪೂಜೆ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ಬಡವರಿಗೆ ಹಸಿವು ನೀಗಿಸಲು ಉಪಯುಕ್ತವಾಗಿದೆ. ಬೊಮ್ಮಸಂದ್ರ ಕೈಗಾರಿಕ ಪ್ರದೇಶ ಆಗಿರುವುದರಿಂದ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರಿದ್ದಾರೆ. ಅವರಿಗೆ ಅನುಕೂಲ ಕಲ್ಪಿಸಲು ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.</p>.<p>ಆನೇಕಲ್ ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಇಂದಿರಾ ಕ್ಯಾಂಟಿನ್ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಕ್ಯಾಂಟೀನ್ ನಿರ್ಮಿಸಲಾಗುವುದು ಎಂದು ತಿಳಿಸಿದರು.</p>.<p>ಬೊಮ್ಮಸಂದ್ರ ಕೈಗಾರಿಕ ಪ್ರದೇಶ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗುವುದು. ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ಸಂಪರ್ಕ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಮೆಟ್ರೊ ವಿಸ್ತರಣೆಯಿಂದಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮೆಟ್ರೊ ಪೂರಕವಾಗಲಿದೆ ಎಂದು ತಿಳಿಸಿದರು.</p>.<p>ಬೊಮ್ಮಸಂದ್ರ ಕೈಗಾರಿಕ ಮಾಲೀಕರ ಸಂಘದ ಅಧ್ಯಕ್ಷ ಪ್ರಸಾದ್ ಮಾತನಾಡಿ, ಅಭಿವೃದ್ಧಿಗೆ ಕೈಗಾರಿಕ ಸಂಘ ಬದ್ಧವಾಗಿದೆ. ಕಂಪನಿಗಳ ಸಿಎಸ್ಆರ್ ನಿಧಿಯಡಿಯಲ್ಲಿ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಕೈಗಾರಿಕ ಸಂಘವು ಅಭಿವೃದ್ಧಿಗೆ ಸದಾ ಬೆನ್ನೆಲುಬಾಗಿರುತ್ತದೆ ಎಂದರು.</p>.<p>ಬೊಮ್ಮಸಂದ್ರ ಪುರಸಭೆ ಅಧ್ಯಕ್ಷ ಗೋಪಾಲ್, ಸದಸ್ಯರಾದ ಛಲಪತಿ, ಅಭಿಷೇಕ್, ಮುಖ್ಯಾಧಿಕಾರಿ ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>