<p><strong>ದೊಡ್ಡಬಳ್ಳಾಪುರ: </strong>ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರ ಖಾತೆಗಳಿಗೆ ನೇರವಾಗಿ ವಾರ್ಷಿಕ ₹ 6 ಸಾವಿರ ಆರ್ಥಿಕ ನೆರವು ನೀಡಲು ಅಗತ್ಯ ಇರುವ ಸ್ವಯಂ ದೃಢೀಕರಣವನ್ನು ಗ್ರಾಮ ಲೆಕ್ಕಾಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುವ ಮೂಲಕ ಒಂದು ವಾರದ ಒಳಗೆ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್. ಕರೀಗೌಡ ಹೇಳಿದರು.</p>.<p>ಯೋಜನೆ ಅನುಷ್ಠಾನ ಕುರಿತಂತೆ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವ ಸಲುವಾಗಿ ನಗರದ ಪುರಭವನದಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಈ ಹಿಂದೆ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ರೈತರು ಮಾತ್ರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಆರ್ಥಿಕ ನೆರವು ಪಡೆಯಲು ಅರ್ಹರು ಎನ್ನುವ ನಿಯಮ ಇತ್ತು. ಆದರೆ ಈಗ ಈ ನಿಯಮವನ್ನು ತೆರವುಗೊಳಿಸಲಾಗಿದೆ. ಭೂಮಿ ಹೊಂದಿರುವ ಪ್ರತಿಯೊಬ್ಬ ರೈತರು ವಾರ್ಷಿಕ ₹ 6 ಸಾವಿರವನ್ನು ಎಲ್ಲ ರೈತರು ಪಡೆಯಲು ಅರ್ಹರಾಗಿದ್ದಾರೆ ಎಂದರು.</p>.<p class="Subhead"><strong>ಅರ್ಹರಲ್ಲ:</strong> ಆದರೆ ಸರ್ಕಾರಿ ನೌಕರರು ಸೇರಿದಂತೆ, ವಕೀಲರು, ಆದಾಯ ತೆರಿಗೆ ಪಾವತಿಸುವವರು, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಅಧ್ಯಕ್ಷರು ಈ ಯೋಜನೆಯಲ್ಲಿ ನೆರವು ಪಡೆಯಲು ಅರ್ಹರಾಗಿರುವುದಿಲ್ಲ. ಯೋಜನೆಯ ನೆರವು ಪಡೆಯಲು ಎಲ್ಲ ರೈತರಿಗೆ ಮಾಹಿತಿ ನೀಡುವ ಸಲುವಾಗಿ ಎಲ್ಲ ಚುನಾಯಿತ ಜನಪ್ರತಿನಿಧಿಗಳು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿ ಜಿಲ್ಲಾಡಳಿತದಿಂದ ಪತ್ರಗಳನ್ನು ಬರೆದು ಮನವಿ ಮಾಡಲಾಗಿದೆ ಎಂದರು.</p>.<p>ಯಾವೊಬ್ಬ ರೈತರು ಸಹ ಪಿಎಂ ಕಿಸಾನ್ ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ಎಚ್ಚರವ ಹಿಸಬೇಕು. ದಾಖಲೆಗಳನ್ನು ತ್ವರಿತವಾಗಿ ಆನ್ಲೈನ್ ಮೂಲಕ ದಾಖಲಿಸಲು ಅನುಕೂಲವಾಗುವಂತೆ ಮೊಬೈಲ್ ಆಪ್ ಅನ್ನು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಸಹಾಯಕರಿಗೆ ನೀಡಲಾಗುತ್ತಿದೆ. ಈ ಮೊಬೈಲ್ ಆ್ಯಪ್ ಮೂಲಕ ದಾಖಲಾಗುವ ಮಾಹಿತಿಯಿಂದ ಜುಲೈ 15ರ ವೆಳೆಗೆ ರೈತರ ಬ್ಯಾಂಕ್ ಖಾತೆಗಳಿಗೆ ಮೊದಲ ಕಂತಿನ ₹ 2 ಸಾವಿರ ಜಮಾ ಅಗಲಿದೆ ಎಂದರು.</p>.<p>ಎರಡನೇ ಕಂತಿನ ಹಣ ನಾಲ್ಕು ತಿಂಗಳಿಗೆ ಒಮ್ಮೆ ರೈತರ ಖಾತೆಗಳಿಗೆ ಜಮಾ ಆಗಲಿದೆ. ಮುಂದಿನ ಐದು ವರ್ಷಗಳ ಕಾಲ ಕೃಷಿ ಇಲಾಖೆಯಲ್ಲಿ ಈ ದಾಖಲೆಗಳು, ಮಾಹಿತಿಯನ್ನು ಸಂಗ್ರಹಿಸಿ ಇಡಲಾಗುವುದು. ಲೋಕಸಭಾ ಚುನಾವಣೆಗಿಂತ ಹಿಂದೆ ಅರ್ಜಿ ಸಲ್ಲಿಸಿರುವವರು ಸಹ ಸ್ವಯಂ ದೃಢೀಕರಣವನ್ನು ಗ್ರಾಮ ಲೆಕ್ಕಾಧಿಕಾರಿಗೆ ನೀಡಬೇಕು. ಸ್ವಯಂ ದೃಢೀಕರಣ ಪತ್ರದೊಂದಿಗೆ ರೈತರು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿಯನ್ನು ಮಾತ್ರ ನೀಡಬೇಕು ಎಂದರು.</p>.<p>ಉಪವಿಭಾಗಾಧಿಕಾರಿ ಸಿ.ಮಂಜುನಾಥ್, ತಹಶೀಲ್ದಾರ್ ಎಂ.ಕೆ.ರಮೇಶ್, ರಾಜಶೇಖರ್, ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕಿ ವಿನುತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರ ಖಾತೆಗಳಿಗೆ ನೇರವಾಗಿ ವಾರ್ಷಿಕ ₹ 6 ಸಾವಿರ ಆರ್ಥಿಕ ನೆರವು ನೀಡಲು ಅಗತ್ಯ ಇರುವ ಸ್ವಯಂ ದೃಢೀಕರಣವನ್ನು ಗ್ರಾಮ ಲೆಕ್ಕಾಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುವ ಮೂಲಕ ಒಂದು ವಾರದ ಒಳಗೆ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್. ಕರೀಗೌಡ ಹೇಳಿದರು.</p>.<p>ಯೋಜನೆ ಅನುಷ್ಠಾನ ಕುರಿತಂತೆ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವ ಸಲುವಾಗಿ ನಗರದ ಪುರಭವನದಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಈ ಹಿಂದೆ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ರೈತರು ಮಾತ್ರ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಆರ್ಥಿಕ ನೆರವು ಪಡೆಯಲು ಅರ್ಹರು ಎನ್ನುವ ನಿಯಮ ಇತ್ತು. ಆದರೆ ಈಗ ಈ ನಿಯಮವನ್ನು ತೆರವುಗೊಳಿಸಲಾಗಿದೆ. ಭೂಮಿ ಹೊಂದಿರುವ ಪ್ರತಿಯೊಬ್ಬ ರೈತರು ವಾರ್ಷಿಕ ₹ 6 ಸಾವಿರವನ್ನು ಎಲ್ಲ ರೈತರು ಪಡೆಯಲು ಅರ್ಹರಾಗಿದ್ದಾರೆ ಎಂದರು.</p>.<p class="Subhead"><strong>ಅರ್ಹರಲ್ಲ:</strong> ಆದರೆ ಸರ್ಕಾರಿ ನೌಕರರು ಸೇರಿದಂತೆ, ವಕೀಲರು, ಆದಾಯ ತೆರಿಗೆ ಪಾವತಿಸುವವರು, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಅಧ್ಯಕ್ಷರು ಈ ಯೋಜನೆಯಲ್ಲಿ ನೆರವು ಪಡೆಯಲು ಅರ್ಹರಾಗಿರುವುದಿಲ್ಲ. ಯೋಜನೆಯ ನೆರವು ಪಡೆಯಲು ಎಲ್ಲ ರೈತರಿಗೆ ಮಾಹಿತಿ ನೀಡುವ ಸಲುವಾಗಿ ಎಲ್ಲ ಚುನಾಯಿತ ಜನಪ್ರತಿನಿಧಿಗಳು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿ ಜಿಲ್ಲಾಡಳಿತದಿಂದ ಪತ್ರಗಳನ್ನು ಬರೆದು ಮನವಿ ಮಾಡಲಾಗಿದೆ ಎಂದರು.</p>.<p>ಯಾವೊಬ್ಬ ರೈತರು ಸಹ ಪಿಎಂ ಕಿಸಾನ್ ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ಎಚ್ಚರವ ಹಿಸಬೇಕು. ದಾಖಲೆಗಳನ್ನು ತ್ವರಿತವಾಗಿ ಆನ್ಲೈನ್ ಮೂಲಕ ದಾಖಲಿಸಲು ಅನುಕೂಲವಾಗುವಂತೆ ಮೊಬೈಲ್ ಆಪ್ ಅನ್ನು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಸಹಾಯಕರಿಗೆ ನೀಡಲಾಗುತ್ತಿದೆ. ಈ ಮೊಬೈಲ್ ಆ್ಯಪ್ ಮೂಲಕ ದಾಖಲಾಗುವ ಮಾಹಿತಿಯಿಂದ ಜುಲೈ 15ರ ವೆಳೆಗೆ ರೈತರ ಬ್ಯಾಂಕ್ ಖಾತೆಗಳಿಗೆ ಮೊದಲ ಕಂತಿನ ₹ 2 ಸಾವಿರ ಜಮಾ ಅಗಲಿದೆ ಎಂದರು.</p>.<p>ಎರಡನೇ ಕಂತಿನ ಹಣ ನಾಲ್ಕು ತಿಂಗಳಿಗೆ ಒಮ್ಮೆ ರೈತರ ಖಾತೆಗಳಿಗೆ ಜಮಾ ಆಗಲಿದೆ. ಮುಂದಿನ ಐದು ವರ್ಷಗಳ ಕಾಲ ಕೃಷಿ ಇಲಾಖೆಯಲ್ಲಿ ಈ ದಾಖಲೆಗಳು, ಮಾಹಿತಿಯನ್ನು ಸಂಗ್ರಹಿಸಿ ಇಡಲಾಗುವುದು. ಲೋಕಸಭಾ ಚುನಾವಣೆಗಿಂತ ಹಿಂದೆ ಅರ್ಜಿ ಸಲ್ಲಿಸಿರುವವರು ಸಹ ಸ್ವಯಂ ದೃಢೀಕರಣವನ್ನು ಗ್ರಾಮ ಲೆಕ್ಕಾಧಿಕಾರಿಗೆ ನೀಡಬೇಕು. ಸ್ವಯಂ ದೃಢೀಕರಣ ಪತ್ರದೊಂದಿಗೆ ರೈತರು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿಯನ್ನು ಮಾತ್ರ ನೀಡಬೇಕು ಎಂದರು.</p>.<p>ಉಪವಿಭಾಗಾಧಿಕಾರಿ ಸಿ.ಮಂಜುನಾಥ್, ತಹಶೀಲ್ದಾರ್ ಎಂ.ಕೆ.ರಮೇಶ್, ರಾಜಶೇಖರ್, ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕಿ ವಿನುತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>