<p><strong>ಹೊಸಕೋಟೆ</strong>: ತಾಲ್ಲೂಕಿನ ಹಾಗೂ ಸುತ್ತಮುತ್ತಲಿನ ಜನತೆಗೆ ಕಳೆದ ಎರಡು ದಶಕಗಳಿಂದ ಆರೋಗ್ಯದ ಸೇವೆ ನೀಡುತ್ತಾ ಬಂದಿರುವ ಎಂ.ವಿ.ಜೆ ಆಸ್ಪತ್ರೆಯು ಈಗ ಜನತೆಗೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಮುಂದಾಗಿದೆ ಎಂದು ಆಸ್ಪತ್ರೆಯ ಸಹಾಯಕ ಮುಖ್ಯ ಆರೋಗ್ಯಾಧಿಕಾರಿ ಡಾ.ಪ್ರಮೋದ್ ತಿಳಿಸಿದರು.</p>.<p>ಅವರು ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆಯು ಜನರಿಗೆ ಉಚಿತವಾಗಿ ಹಾಗೂ ಕೆಲವು ಸೇವೆಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ ಎಂದರು.</p>.<p>ಆಸ್ಪತ್ರೆಯು ಬೆಂಗಳೂರಿನ ನಾರಾಯಣ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಪ್ರತಿ ಮಂಗಳವಾರ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿ ಕೊಂಡು ಶಸ್ತ್ರಚಿಕಿತ್ಸೆಯ ಎಲ್ಲಾ ವ್ಯವಸ್ಥೆಯನ್ನು ನಾರಾಯಣ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಮಾಡಲಾಗುವುದು ಎಂದುಹೇಳಿದರು.</p>.<p>ನಾರಾಯಣ ಹಾರ್ಟ್ ಸೆಂಟರ್ನ ಡಾ.ಯಶವಂತ್ ಮಾತನಾಡಿ,ಹಾರ್ಟ್ ಕೇರ್ ಸೆಂಟರ್ಗಳ ಕೊರತೆಯಿಂದ ರೋಗಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಹೆಚ್ಚಿನ ಪ್ರಮಾಣದಲ್ಲಿ ಸಾವನ್ನಪ್ಪುತ್ತಿದ್ದಾರೆ. ಅದನ್ನು ತಡೆಯಲು ಈ ಭಾಗದಲ್ಲಿ ಈ ಸೇವೆ ಪ್ರಾರಂಭ ಮಾಡಲಾಗಿದೆ ಎಂದರು.</p>.<p>ಹೃದಯ ಸಂಬಂಧಿ ಚಿಕಿತ್ಸೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಕಾರ್ಡಿಯಾಲಜಿ ವಿಭಾಗಕ್ಕೆ ಪ್ರತ್ಯೇಕ ವೈದ್ಯರನ್ನು ನೇಮಕ ಮಾಡಲಾಗಿದೆ. ರಿಯಾಯಿತಿ ದರದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಹೃದಯ ರೋಗ ತಜ್ಞ ಡಾ.ಮೋಹನ್, ವರದರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ತಾಲ್ಲೂಕಿನ ಹಾಗೂ ಸುತ್ತಮುತ್ತಲಿನ ಜನತೆಗೆ ಕಳೆದ ಎರಡು ದಶಕಗಳಿಂದ ಆರೋಗ್ಯದ ಸೇವೆ ನೀಡುತ್ತಾ ಬಂದಿರುವ ಎಂ.ವಿ.ಜೆ ಆಸ್ಪತ್ರೆಯು ಈಗ ಜನತೆಗೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಮುಂದಾಗಿದೆ ಎಂದು ಆಸ್ಪತ್ರೆಯ ಸಹಾಯಕ ಮುಖ್ಯ ಆರೋಗ್ಯಾಧಿಕಾರಿ ಡಾ.ಪ್ರಮೋದ್ ತಿಳಿಸಿದರು.</p>.<p>ಅವರು ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆಯು ಜನರಿಗೆ ಉಚಿತವಾಗಿ ಹಾಗೂ ಕೆಲವು ಸೇವೆಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ ಎಂದರು.</p>.<p>ಆಸ್ಪತ್ರೆಯು ಬೆಂಗಳೂರಿನ ನಾರಾಯಣ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಪ್ರತಿ ಮಂಗಳವಾರ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿ ಕೊಂಡು ಶಸ್ತ್ರಚಿಕಿತ್ಸೆಯ ಎಲ್ಲಾ ವ್ಯವಸ್ಥೆಯನ್ನು ನಾರಾಯಣ ಹಾರ್ಟ್ ಸೆಂಟರ್ ಸಹಯೋಗದಲ್ಲಿ ಮಾಡಲಾಗುವುದು ಎಂದುಹೇಳಿದರು.</p>.<p>ನಾರಾಯಣ ಹಾರ್ಟ್ ಸೆಂಟರ್ನ ಡಾ.ಯಶವಂತ್ ಮಾತನಾಡಿ,ಹಾರ್ಟ್ ಕೇರ್ ಸೆಂಟರ್ಗಳ ಕೊರತೆಯಿಂದ ರೋಗಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಹೆಚ್ಚಿನ ಪ್ರಮಾಣದಲ್ಲಿ ಸಾವನ್ನಪ್ಪುತ್ತಿದ್ದಾರೆ. ಅದನ್ನು ತಡೆಯಲು ಈ ಭಾಗದಲ್ಲಿ ಈ ಸೇವೆ ಪ್ರಾರಂಭ ಮಾಡಲಾಗಿದೆ ಎಂದರು.</p>.<p>ಹೃದಯ ಸಂಬಂಧಿ ಚಿಕಿತ್ಸೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಕಾರ್ಡಿಯಾಲಜಿ ವಿಭಾಗಕ್ಕೆ ಪ್ರತ್ಯೇಕ ವೈದ್ಯರನ್ನು ನೇಮಕ ಮಾಡಲಾಗಿದೆ. ರಿಯಾಯಿತಿ ದರದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಹೃದಯ ರೋಗ ತಜ್ಞ ಡಾ.ಮೋಹನ್, ವರದರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>