ಇದು ಮಂಡಿಬೆಲೆ ಕಡೆಗೆ ಸಂಚರಿಸುವ ಮುಖ್ಯರಸ್ತೆಯಾಗಿದ್ದು, ನೂರಾರು ವಾಹನಗಳು ಸಂಚರಿಸುತ್ತವೆ. ಜನರೂ ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಾರೆ. ರಾಜಕಾಲುವೆಯ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಿಸದೆ ಇರುವ ಕಾರಣ ವಾಹನ ಸವಾರರು ಆಯತಪ್ಪಿ ಕಾಲುವೆಗೆ ಬಿದ್ದಿರುವ ಉದಾಹರಣೆಗಳೂ ಇವೆ. ಮಕ್ಕಳು ಆಯತಪ್ಪಿ ನೀರಿಗೆ ಬಿದ್ದರೆ ಮೇಲೆ ಎದ್ದುಬರಲಿಕ್ಕೂ ಸಾಧ್ಯವಾಗುವುದಿಲ್ಲ ಅಂತಹ ಪರಿಸ್ಥಿತಿಯಿದೆ ಎಂದು ಆರೋಪಿಸಿದರು.