ಈಗಾಗಲೇ ವೆಂಕಟಗಿರಿಕೋಟೆ, ಇರಿಗೇನಹಳ್ಳಿ, ಹಾರೋಹಳ್ಳಿ ಮುಂತಾದ ಕಡೆಗಳಲ್ಲಿ ಆಲಿಕಲ್ಲಿನ ಮಳೆಯಿಂದ ಬೆಳೆ ನಷ್ಟ ಮಾಡಿಕೊಂಡಿರುವ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದರು. ಇದೀಗ ದಿಢೀರ್ ಬೆಲೆ ಏರಿಕೆಯಾಗಿರುವುದು ಬೆಳೆಗಾರರಲ್ಲಿ ಸಂಭ್ರಮ ಮನೆ ಮಾಡಿದೆ. ತೋಟಗಳಲ್ಲಿ ಉಳಿದಿರುವ ದ್ರಾಕ್ಷಿ ಫಸಲಿನ ಕಟಾವಿನಲ್ಲಿ ತೊಡಗಿದ್ದಾರೆ. ಕೂಲಿ ಕಾರ್ಮಿಕರಿಗೂ ಕೈ ತುಂಬ ಕೆಲಸ ಸಿಗುತ್ತಿದೆ.