<p><strong>ದೊಡ್ಡಬಳ್ಳಾಪುರ:</strong>ರಾಜ್ಯದ ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವಂತೆ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ನಾಗಣ್ಣಗೌಡ ಆಗ್ರಹಿಸಿದ್ದಾರೆ.</p>.<p>ನಗರಸಭೆ ಕಾರ್ಯಾಲಯದ ಬಳಿಯ ನೀರು ಸರಬರಾಜು ಕೇಂದ್ರದ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಭೆಯಲ್ಲಿ ಮಾತನಾಡಿದರು.</p>.<p>ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾಹನ ಚಾಲಕರು ವಾಟರ್ ಮನ್, ತ್ಯಾಜ್ಯ ಸಹಾಯಕರು, ಡಾಟಾ ಆಪರೇಟರ್ಗಳು ಸೇರಿದಂತೆ ಹತ್ತು ಸಾವಿರಕ್ಕು ಹೆಚ್ಚು ಮಂದಿ ಹೊರಗುತ್ತಿಗೆಯಲ್ಲಿ ದುಡಿಯುತ್ತಿದ್ದಾರೆ. ಯಾವುದೇ ಸೇವಾಭದ್ರತೆಯಿಲ್ಲದ ಈ ನೌಕರರನ್ನು ಮನಸೋ ಇಚ್ಛೆ ದುಡಿಸಿಕೊಂಡು ಕೆಲಸದಿಂದ ಕೈ ಬಿಡುವ ಪ್ರವೃತ್ತಿ ಇದೆ. ಬಹಳಷ್ಟು ಕಡೆ ಕನಿಷ್ಠ ವೇತನ ಭವಿಷ್ಯ ನಿಧಿ ಕ್ರಮವಾಗಿ ಪಾವತಿಯಾಗುತ್ತಿಲ್ಲ. ಸರಿಪಡಿಸಬೇಕಾದ ಕಾರ್ಮಿಕ ಇಲಾಖೆ ಕುರುಡಾಗಿದೆ ಎಂದು ದೂರಿದರು.</p>.<p>ರಾಜ್ಯ ಪೌರ ಕಾರ್ಮಿಕರ ಸಂಘದ ಯುವ ಅಧ್ಯಕ್ಷ ಚಲಪತಿ. ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್, ದೊಡ್ಡಬಳ್ಳಾಪುರ ಹೊರಗುತ್ತಿಗೆ ನೌಕರರ ಸಂಘದ ಚಂದ್ರಶೇಖರ್, ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong>ರಾಜ್ಯದ ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವಂತೆ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ನಾಗಣ್ಣಗೌಡ ಆಗ್ರಹಿಸಿದ್ದಾರೆ.</p>.<p>ನಗರಸಭೆ ಕಾರ್ಯಾಲಯದ ಬಳಿಯ ನೀರು ಸರಬರಾಜು ಕೇಂದ್ರದ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಸಭೆಯಲ್ಲಿ ಮಾತನಾಡಿದರು.</p>.<p>ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾಹನ ಚಾಲಕರು ವಾಟರ್ ಮನ್, ತ್ಯಾಜ್ಯ ಸಹಾಯಕರು, ಡಾಟಾ ಆಪರೇಟರ್ಗಳು ಸೇರಿದಂತೆ ಹತ್ತು ಸಾವಿರಕ್ಕು ಹೆಚ್ಚು ಮಂದಿ ಹೊರಗುತ್ತಿಗೆಯಲ್ಲಿ ದುಡಿಯುತ್ತಿದ್ದಾರೆ. ಯಾವುದೇ ಸೇವಾಭದ್ರತೆಯಿಲ್ಲದ ಈ ನೌಕರರನ್ನು ಮನಸೋ ಇಚ್ಛೆ ದುಡಿಸಿಕೊಂಡು ಕೆಲಸದಿಂದ ಕೈ ಬಿಡುವ ಪ್ರವೃತ್ತಿ ಇದೆ. ಬಹಳಷ್ಟು ಕಡೆ ಕನಿಷ್ಠ ವೇತನ ಭವಿಷ್ಯ ನಿಧಿ ಕ್ರಮವಾಗಿ ಪಾವತಿಯಾಗುತ್ತಿಲ್ಲ. ಸರಿಪಡಿಸಬೇಕಾದ ಕಾರ್ಮಿಕ ಇಲಾಖೆ ಕುರುಡಾಗಿದೆ ಎಂದು ದೂರಿದರು.</p>.<p>ರಾಜ್ಯ ಪೌರ ಕಾರ್ಮಿಕರ ಸಂಘದ ಯುವ ಅಧ್ಯಕ್ಷ ಚಲಪತಿ. ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್, ದೊಡ್ಡಬಳ್ಳಾಪುರ ಹೊರಗುತ್ತಿಗೆ ನೌಕರರ ಸಂಘದ ಚಂದ್ರಶೇಖರ್, ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>