ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸಿನಲ್ಲಿ ಮಹಿಳೆಯರಿಗೆ ಮೀಸಲಿಟ್ಟಿದ್ದ ಆಸನದಲ್ಲಿ ಕುಳಿತಿದ್ದ ಪಾನಮತ್ತ ವ್ಯಕ್ತಿಯನ್ನು ಸೀಟು ಬಿಟ್ಟು ಬೇರೆ ಕಡೆಗೆ ಹೋಗುವಂತೆ ತಿಳಿಸಿದಾಗ ನಿರ್ವಾಹಕರನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ನಿರ್ವಾಹಕರ ಕೈಯಲ್ಲಿದ್ದ ಟಿಕೆಟ್ ಹಂಚಿಕೆ ಯಂತ್ರವನ್ನು ನೆಲಕ್ಕೆ ಎಸೆದು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ’ ಎಂದರು.