ವಿಜಯಪುರ: ‘ಆಧಾರ್’ ಕಾರ್ಡ್ ನೋಂದಣಿ, ತಿದ್ದುಪಡಿ, ಸ್ಥಳ ಬದಲಾವಣೆ ಸೇರಿದಂತೆ ವಿವಿಧ ಮಾರ್ಪಾಡು ಮಾಡಲು ಜನರು ಪರದಾಡುವಂತಾಗಿದೆ ಎಂದು ಸ್ಥಳೀಯ ನಿವಾಸಿ ಜಿ.ರಾಜಗೋಪಾಲ್ ಆರೋಪಿಸಿದರು.
ಫೆ.15ರಿಂದ ಶಾಲೆಗಳಿಗೆ ಆರ್.ಟಿ.ಇ ಅಡಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಮಕ್ಕಳ ಆಧಾರ್ ಕಾರ್ಡ್, ಪೋಷಕರ ಆಧಾರ್ ಕಾರ್ಡ್ ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಕಾರ್ಡ್ಗಳಲ್ಲಿ ಹೆಸರು, ಮೊಬೈಲ್ ನಂಬರ್, ಪೋಷಕರ ಹೆಸರು, ವಿಳಾಸದಲ್ಲಿ ಆಗಿರುವ ಲೋಪದೋಷ ಸರಿಪಡಿಸಿಕೊಳ್ಳಲು ಜನರು ಬ್ಯಾಂಕ್ಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬ್ಯಾಂಕ್ಗಳಲ್ಲಿ ದಿನಕ್ಕೆ 20ಮಂದಿಗೆ ಟೋಕನ್ ಕೊಟ್ಟು, ಅವರು ಹೇಳಿದ ದಿನದಲ್ಲಿ ಮಾತ್ರ ತಿದ್ದುಪಡಿ, ನೋಂದಣಿ ಮಾಡಲಾಗುತ್ತಿದೆ. ನಗರದಲ್ಲಿ ಆಧಾರ್ ಸೇವಾ ಕೇಂದ್ರವಿಲ್ಲ. ನಾಡಕಚೇರಿಯಲ್ಲಿ ಇದ್ದರೂ 2 ತಿಂಗಳಿನಿಂದ ಕಂಪ್ಯೂಟರ್ ಕೆಟ್ಟುಹೋಗಿದೆ. ಇದರಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ದೂರಿದರು.