ಅವರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾರ್ಚ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾ.8ರದು ಅನಿದಿಷ್ಟಾವಧಿ ಸತ್ಯಾಗ್ರಹ ನಡೆಸಲಾಗುವುದು. ಸರ್ಕಾರವೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನೇಮಿಸಿದ ಆಯೋಗದ ವರದಿ ಅನುಷ್ಠಾನಗೊಳಿಸಲು ಸರ್ಕಾರವೇ ಹಿಂದೇಟು ಹಾಕುತ್ತಿರುವುದು ಸರಿ ಅಲ್ಲ. ಕಳೆದ ಶಿರಾ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ನೀಡಿದ ಆಶ್ವಾಸನೆಯಂತೆ ವರದಿ ಜಾರಿಗೆ ತರಲು ಮುಂದಾಗಬೇಕು ಎಂದು ಒತ್ತಾಯಿಸಿದರು.