<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳಿಗಳ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಮೇ 7 ರಂದು ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹಲಸು ಮೇಳೆ ನಡೆಸಲು ತೋಟಗಾರಿಕೆ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಗುಣವಂತ ಅವರಿಗೆ ಸೂಚನೆ ನೀಡಿದ್ದಾರೆ.</p>.<p>ಮೇ 7 ರಂದು ಘಾಟಿ ಕ್ಷೇತ್ರದಲ್ಲಿ ಮಾಂಗಲ್ಯ ಭಾಗ್ಯ ಯೋಜನೆಯಲ್ಲಿ ಸಾಮೂಹಿಕ ವಿವಾಹಗಳು ನಡೆಯಲಿವೆ. ಸಾವಿರಾರು ಜನ ಭಾಗವಹಿಸುವುದರಿಂದ ಪ್ರಥಮವಾಗಿ ಇಲ್ಲಿ ಹಲಸು ಮೇಳ ನಡೆಸಲಾಗುವುದು. ನಂತರ ನಗರದ ಹಿಂದೂಪುರ-ಬೆಂಗಳೂರು ರಸ್ತೆ ಬದಿಯಲ್ಲೂ ಸೂಕ್ತ ಸ್ಥಳ ಗುರುತಿಸಿ ಹಲಸು ಮೇಳೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು.</p>.<p>ನಗರದ ಎಪಿಎಂಸಿ ಮಾರುಕಟ್ಟೆ ರಸ್ತೆ ಬದಿಯಲ್ಲಿ ಈಗ ರೈತರು ಹಾಗೂ ವ್ಯಾಪಾರಸ್ಥರು ಮಾರಾಟ ಮಾಡುತ್ತಿರುವ ಹಲಸಿಗೆ ಸೂಕ್ತ ಸೌಲಭ್ಯ ಕಲ್ಪಿಸಲು ನಗರಸಭೆ ಪೌರಾಯುಕ್ತರು ಹಾಗೂ ಎಪಿಎಂಸಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಹಲಸು ಬೆಳೆಗಾರ ಜಿ.ರಾಜಶೇಖರ್ ಹಾಗೂ ತೂಬಗೆರೆ ಭಾಗದ ಹಲಸು ಬೆಳೆಗಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳಿಗಳ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಮೇ 7 ರಂದು ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹಲಸು ಮೇಳೆ ನಡೆಸಲು ತೋಟಗಾರಿಕೆ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಗುಣವಂತ ಅವರಿಗೆ ಸೂಚನೆ ನೀಡಿದ್ದಾರೆ.</p>.<p>ಮೇ 7 ರಂದು ಘಾಟಿ ಕ್ಷೇತ್ರದಲ್ಲಿ ಮಾಂಗಲ್ಯ ಭಾಗ್ಯ ಯೋಜನೆಯಲ್ಲಿ ಸಾಮೂಹಿಕ ವಿವಾಹಗಳು ನಡೆಯಲಿವೆ. ಸಾವಿರಾರು ಜನ ಭಾಗವಹಿಸುವುದರಿಂದ ಪ್ರಥಮವಾಗಿ ಇಲ್ಲಿ ಹಲಸು ಮೇಳ ನಡೆಸಲಾಗುವುದು. ನಂತರ ನಗರದ ಹಿಂದೂಪುರ-ಬೆಂಗಳೂರು ರಸ್ತೆ ಬದಿಯಲ್ಲೂ ಸೂಕ್ತ ಸ್ಥಳ ಗುರುತಿಸಿ ಹಲಸು ಮೇಳೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು.</p>.<p>ನಗರದ ಎಪಿಎಂಸಿ ಮಾರುಕಟ್ಟೆ ರಸ್ತೆ ಬದಿಯಲ್ಲಿ ಈಗ ರೈತರು ಹಾಗೂ ವ್ಯಾಪಾರಸ್ಥರು ಮಾರಾಟ ಮಾಡುತ್ತಿರುವ ಹಲಸಿಗೆ ಸೂಕ್ತ ಸೌಲಭ್ಯ ಕಲ್ಪಿಸಲು ನಗರಸಭೆ ಪೌರಾಯುಕ್ತರು ಹಾಗೂ ಎಪಿಎಂಸಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಹಲಸು ಬೆಳೆಗಾರ ಜಿ.ರಾಜಶೇಖರ್ ಹಾಗೂ ತೂಬಗೆರೆ ಭಾಗದ ಹಲಸು ಬೆಳೆಗಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>