<p><strong>ದೇವನಹಳ್ಳಿ:</strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯು ನ. 28ರಂದು ತಾಲ್ಲೂಕನ್ನು ಪ್ರವೇಶಿಸಲಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರಹಳ್ಳಿ ಕ್ರಾಸ್ನಲ್ಲಿ ಚಿಕ್ಕಬಳ್ಳಾಪುರದಿಂದ ಬರುತ್ತಿರುವ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ತಾಲ್ಲೂಕಿನಾದ್ಯಂತ ರಥ ಸಂಚಾರ ಮಾಡಲಿದೆ. ಗ್ರಾಮೀಣ ಬದುಕಿಗೆ ಮಹತ್ವದ ಯೋಜನೆಗಳನ್ನು ಹೊತ್ತು ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ ಎಂದರು.</p>.<p>ಯಾತ್ರೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಲಿದ್ದು, ಹಣ ಕೊಟ್ಟು ಯಾರನ್ನು ಕರೆಯಿಸುವುದಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಗ್ರಾ.ಪಂ. ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳನ್ನು ಎಚ್ಡಿಕೆ ಮಾತನಾಡಿಸಲಿದ್ದಾರೆ. ಅವರ ಜನಪ್ರಿಯತೆಯಿಂದಲೇ ಸಾವಿರಾರು ಜನರು ಸೇರುತ್ತಾರೆ ಎಂದು ಹೇಳಿದರು.</p>.<p>ದೇವನಹಳ್ಳಿಯು ರೇಷ್ಮೆ, ಹಾಲು ಉತ್ಪಾದನೆ, ದ್ರಾಕ್ಷಿ ಕೃಷಿಗೆ ಹೆಸರುವಾಸಿಯಾಗಿದೆ. ಇಲ್ಲಿನ ಜನರ ಕಷ್ಟಸುಖದ ಬಗ್ಗೆ ಅವರೇ ಭೇಟಿ ನೀಡಿ ಮಾಹಿತಿ ಪಡೆಯುವ ಸದುದ್ದೇಶದ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.</p>.<p>ವೈಜ್ಞಾನಿಕವಾಗಿ ತಯಾರಾದ ಯೋಜನೆ:ಶಿಕ್ಷಣ, ಆರೋಗ್ಯ, ರೈತ, ವಸತಿ, ಯುವಕರು ಹಾಗೂ ಮಹಿಳಾ ಸಬಲೀಕರಣಕ್ಕೆ ವಿಶಿಷ್ಟವಾದಂತಹ ಯೋಜನೆಗಳನ್ನು ಹೊತ್ತು ಪಂಚರತ್ನ ರಥವು ತಾಲ್ಲೂಕಿಗೆ ಬರುತ್ತಿದೆ. ನಿವೃತ್ತ ಐಎಎಸ್ ಅಧಿಕಾರಿಗಳು, ವಿಚಾರಶೀಲರು, ತಜ್ಞರು, ಪ್ರಗತಿಪರರೊಂದಿಗೆ ಚರ್ಚಿಸಿ ಈ ಯೋಜನೆ ರೂಪಗೊಂಡಿದೆ ಎಂದು ಹೇಳಿದರು.</p>.<p>ರೈತರ ಸಾಲ ಮನ್ನಾ ಮಾಡಿ ನುಡಿದಂತೆ ನಡೆದ ಕುಮಾರಸ್ವಾಮಿ ಅವರ ದೂರದೃಷ್ಟಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>5 ಕಡೆ ಸಾರ್ವಜನಿಕ ಸಭೆ: ಯಾತ್ರೆಗೆ ಈಗಾಗಲೇ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವನಹಳ್ಳಿಯಲ್ಲಿ ಕುಮಾರಸ್ವಾಮಿ ಸಂಚರಿಸಲಿದ್ದಾರೆ. ಆವತಿ, ಹಾರೋಹಳ್ಳಿ, ಚನ್ನರಾಯಪಟ್ಟಣ, ಬೂದಿಗೆರೆ ಹಾಗೂ ಕುಂದಾಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಆರ್. ಮುನೇಗೌಡ ತಿಳಿಸಿದರು.</p>.<p>ದೊಡ್ಡಬಳ್ಳಾಪುರದ ಗಡಿಗೆ ಹೊಂದಿಕೊಂಡಿರುವ ಆಲೂರು ದುದ್ದನಹಳ್ಳಿಯಲ್ಲಿ ಸೋಮವಾರ ರಾತ್ರಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಂದು ರಾತ್ರಿ 10ಗಂಟೆಗೆ ಪ್ರಗತಿಪರ ಹಾಲು ಉತ್ಪಾದಕರೊಂದಿಗೆ ವಿಶೇಷ ಸಂವಾದ ಹಮ್ಮಿಕೊಳ್ಳಲಾಗಿದೆ. ದಲಿತರು, ಅಲ್ಪಸಂಖ್ಯಾತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.</p>.<p>ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ಮುಖಂಡರಾದ ಆನಂದ್, ದುಬೈ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯು ನ. 28ರಂದು ತಾಲ್ಲೂಕನ್ನು ಪ್ರವೇಶಿಸಲಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರಹಳ್ಳಿ ಕ್ರಾಸ್ನಲ್ಲಿ ಚಿಕ್ಕಬಳ್ಳಾಪುರದಿಂದ ಬರುತ್ತಿರುವ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ತಾಲ್ಲೂಕಿನಾದ್ಯಂತ ರಥ ಸಂಚಾರ ಮಾಡಲಿದೆ. ಗ್ರಾಮೀಣ ಬದುಕಿಗೆ ಮಹತ್ವದ ಯೋಜನೆಗಳನ್ನು ಹೊತ್ತು ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ ಎಂದರು.</p>.<p>ಯಾತ್ರೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಲಿದ್ದು, ಹಣ ಕೊಟ್ಟು ಯಾರನ್ನು ಕರೆಯಿಸುವುದಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಗ್ರಾ.ಪಂ. ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳನ್ನು ಎಚ್ಡಿಕೆ ಮಾತನಾಡಿಸಲಿದ್ದಾರೆ. ಅವರ ಜನಪ್ರಿಯತೆಯಿಂದಲೇ ಸಾವಿರಾರು ಜನರು ಸೇರುತ್ತಾರೆ ಎಂದು ಹೇಳಿದರು.</p>.<p>ದೇವನಹಳ್ಳಿಯು ರೇಷ್ಮೆ, ಹಾಲು ಉತ್ಪಾದನೆ, ದ್ರಾಕ್ಷಿ ಕೃಷಿಗೆ ಹೆಸರುವಾಸಿಯಾಗಿದೆ. ಇಲ್ಲಿನ ಜನರ ಕಷ್ಟಸುಖದ ಬಗ್ಗೆ ಅವರೇ ಭೇಟಿ ನೀಡಿ ಮಾಹಿತಿ ಪಡೆಯುವ ಸದುದ್ದೇಶದ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.</p>.<p>ವೈಜ್ಞಾನಿಕವಾಗಿ ತಯಾರಾದ ಯೋಜನೆ:ಶಿಕ್ಷಣ, ಆರೋಗ್ಯ, ರೈತ, ವಸತಿ, ಯುವಕರು ಹಾಗೂ ಮಹಿಳಾ ಸಬಲೀಕರಣಕ್ಕೆ ವಿಶಿಷ್ಟವಾದಂತಹ ಯೋಜನೆಗಳನ್ನು ಹೊತ್ತು ಪಂಚರತ್ನ ರಥವು ತಾಲ್ಲೂಕಿಗೆ ಬರುತ್ತಿದೆ. ನಿವೃತ್ತ ಐಎಎಸ್ ಅಧಿಕಾರಿಗಳು, ವಿಚಾರಶೀಲರು, ತಜ್ಞರು, ಪ್ರಗತಿಪರರೊಂದಿಗೆ ಚರ್ಚಿಸಿ ಈ ಯೋಜನೆ ರೂಪಗೊಂಡಿದೆ ಎಂದು ಹೇಳಿದರು.</p>.<p>ರೈತರ ಸಾಲ ಮನ್ನಾ ಮಾಡಿ ನುಡಿದಂತೆ ನಡೆದ ಕುಮಾರಸ್ವಾಮಿ ಅವರ ದೂರದೃಷ್ಟಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>5 ಕಡೆ ಸಾರ್ವಜನಿಕ ಸಭೆ: ಯಾತ್ರೆಗೆ ಈಗಾಗಲೇ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವನಹಳ್ಳಿಯಲ್ಲಿ ಕುಮಾರಸ್ವಾಮಿ ಸಂಚರಿಸಲಿದ್ದಾರೆ. ಆವತಿ, ಹಾರೋಹಳ್ಳಿ, ಚನ್ನರಾಯಪಟ್ಟಣ, ಬೂದಿಗೆರೆ ಹಾಗೂ ಕುಂದಾಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಆರ್. ಮುನೇಗೌಡ ತಿಳಿಸಿದರು.</p>.<p>ದೊಡ್ಡಬಳ್ಳಾಪುರದ ಗಡಿಗೆ ಹೊಂದಿಕೊಂಡಿರುವ ಆಲೂರು ದುದ್ದನಹಳ್ಳಿಯಲ್ಲಿ ಸೋಮವಾರ ರಾತ್ರಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಂದು ರಾತ್ರಿ 10ಗಂಟೆಗೆ ಪ್ರಗತಿಪರ ಹಾಲು ಉತ್ಪಾದಕರೊಂದಿಗೆ ವಿಶೇಷ ಸಂವಾದ ಹಮ್ಮಿಕೊಳ್ಳಲಾಗಿದೆ. ದಲಿತರು, ಅಲ್ಪಸಂಖ್ಯಾತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು.</p>.<p>ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ಮುಖಂಡರಾದ ಆನಂದ್, ದುಬೈ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>