ಗ್ರಾಮದಲ್ಲಿ ಬ್ಯಾಂಕ್ ಇರುವ ಕಟ್ಟಡ ಅತ್ಯಂತ ಹಳೆಯದಾಗಿದೆ. ಬ್ಯಾಂಕ್ಗೆ ಅಗತ್ಯ ಇರುವ ಸುರಕ್ಷತೆಯ ಯಾವುದೇ ಮಾನದಂಡ ಪಾಲಿಸದಿರುವುದೇ ದುಷ್ಕರ್ಮಿಗಳು ಕಳವು ಕೃತ್ಯಕ್ಕೆ ಈ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವ ಕಾರಣವಾಗಿದೆ. ದೊಡ್ಡ ಮೊತ್ತದ ಚಿನ್ನಾಭರಣಗಳನ್ನು ತಾಲ್ಲೂಕು ಕೇಂದ್ರದಿಂದ 22 ಕಿ.ಮೀ ದೂರದ ಹಳ್ಳಿಯಲ್ಲಿನ ಬ್ಯಾಂಕ್ನಲ್ಲಿ ಇಡುವ ಅಗತ್ಯ ಇರಲಿಲ್ಲ. ಈ ಬಗ್ಗೆಅಧಿಕಾರಿಗಳು ಕನಿಷ್ಠ ಮುನ್ನೆಚ್ಚರಿಕೆ ವಹಿಸಬೇಕಿತ್ತು ಎನ್ನುವ ಮಾತುಗಳು ಪೊಲೀಸರು ಹಾಗೂ ಗ್ರಾಹಕರಿಂದ ಕೇಳಿಬರುತ್ತಿವೆ.