ಆನೇಕಲ್ನಲ್ಲಿ ಉದ್ಯೋಗ ಮೇಳ

ಆನೇಕಲ್: ತಾಲ್ಲೂಕಿನ ಸೂರ್ಯ ಸಿಟಿಯಲ್ಲಿ ಬಿಜೆಪಿ ವತಿಯಿಂದ ಭಾನುವಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು. 40ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದವು. 1,650 ಉದ್ಯೋಗಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಂಡಿದ್ದು, ಈ ಪೈಕಿ 367 ಮಂದಿಗೆ ಸ್ಥಳದಲ್ಲಿಯೇ ಉದ್ಯೋಗ ಪತ್ರ ನೀಡಲಾಯಿತು.
ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ, ಉದ್ಯೋಗ ಇಂದಿನ ಅವಶ್ಯಕತೆಯಾಗಿದೆ. ಉದ್ಯೋಗ ಮಾಡುವ ಉತ್ಸಾಹವಿದ್ದರೂ ಸರಿಯಾದ ಮಾರ್ಗದರ್ಶನವಿಲ್ಲದೆ ಹಲವು ಯುವಕರು ನಿರುದ್ಯೋಗಿಗಳಾಗಿ ಉಳಿಯುತ್ತಿದ್ದಾರೆ. ಉದ್ಯೋಗ ಮೇಳದ ಆಯೋಜನೆ ಮೂಲಕ ಯುವಕರಿಗೆ ಉದ್ಯೋಗದ ಮಾರ್ಗ ತೋರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದರು.
ಕೊರೊನಾದಿಂದಾಗಿ ಆರ್ಥಿಕ ಪರಿಸ್ಥಿತಿ ಕುಸಿತದಿಂದ ಉದ್ಯೋಗಗಳ ಸಮಸ್ಯೆ ಉದ್ಭವಿಸಿತು. ಪ್ರಸ್ತುತ ಚೇತರಿಕೆಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಬಿ.ಬಿ.ಐ. ಮುನಿರೆಡ್ಡಿ ಮಾತನಾಡಿ, ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿವೆ. ಆದರೂ ಎಲ್ಲರಿಗೂ ಉದ್ಯೋಗ ದೊರೆಯುತ್ತಿಲ್ಲ. ಉದ್ಯೋಗ ಹುಡುಕಿಕೊಂಡು ಕಂಪನಿಯಿಂದ ಕಂಪನಿಗಳಿಗೆ ಅಲೆದಾಡಬೇಕಾಗುತ್ತದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಒಂದೆಡೆ ಸೇರುವುದರಿಂದ ಒಂದೇ ಸೂರಿನಲ್ಲಿ ಉದ್ಯೋಗದ ವಿವಿಧ ಅವಕಾಶಗಳು ದೊರೆಯುತ್ತವೆ. ಗ್ರಾಮಾಂತರ ಭಾಗದ ಯುವ ಸಮುದಾಯ ಉದ್ಯೋಗ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಎಂ. ಯಂಗಾರೆಡ್ಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ವಿ. ಶಿವಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ರೆಡ್ಡಿ, ಆನೇಕಲ್ ಪುರಸಭಾ ಸದಸ್ಯ ಸುರೇಶ್, ನಾಗನಾಯಕನಹಳ್ಳಿ ರಾಧಾಕೃಷ್ಣ, ಭಾರತಿ ನಾಗರಾಜು, ಡಾ. ಸುಲೋಚನಾ, ತೇಜಸ್ವಿನಿ ನಟರಾಜ್, ಮಂಜುಳ ನೀಲಕಂಠಯ್ಯ, ಸು.ಧಾ. ಜಯದೇವ್, ರಾಕೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.