ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟದಲ್ಲಿ ಜೋಡಿ ಜಂಬೂಸವಾರಿ

Last Updated 8 ಅಕ್ಟೋಬರ್ 2019, 13:26 IST
ಅಕ್ಷರ ಗಾತ್ರ

ಆನೇಕಲ್: ಇಲ್ಲಿನ ಇತಿಹಾಸ ಪ್ರಸಿದ್ಧ ಬನ್ನೇರುಘಟ್ಟದಲ್ಲಿ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯಿತು. ಗ್ರಾಮದ ಅಧಿದೈವ ಚಂಪಕಧಾಮಸ್ವಾಮಿ ಹಾಗೂ ಗ್ರಾಮ ದೇವತೆ ಚಂಪಕವಲ್ಲಿ ಮಾರಮ್ಮ ದೇವಿ ಅಂಬಾರಿ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಬನ್ನೇರುಘಟ್ಟದ ಚಂಪಕಧಾಮಸ್ವಾಮಿ ದೇವಾಲಯದ ಮುಂಭಾಗದಲ್ಲಿ ವಿಜಯ ದಶಮಿ ಉತ್ಸವಕ್ಕೆ ಗುಮ್ಮಳಾಪುರ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಶಾಸಕ ಎಂ.ಕೃಷ್ಣಪ್ಪ, ಎಪಿಎಂಸಿ ನಿರ್ದೇಶಕ ಜಯರಾಮ್‌, ಮುಖಂಡರಾದ ನಾಗಿರೆಡ್ಡಿ, ವೆಂಕಟೇಶ್‌, ಚೇತನ್‌ ಕುಮಾರ್‌, ದಸರಾ ಸಮಿತಿ ಸದಸ್ಯರಾದ ಬಾಬುಸಿಂಗ್‌, ಅನಂತ್‌ ಸಿಂಗ್‌, ಮದನಗಿರಿ, ಧರ್ಮೇಂದ್ರ ಸಿಂಗ್‌, ಸುರೇಶ್‌, ರಾಘವೇಂದ್ರ, ಕೌಶಿಕ್‌, ಮುನಿರಾಜು, ಮಂಜುನಾಥ್‌ ಇದ್ದರು.

ದಸರಾ ಉತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಅಂಬಾರಿ ಮೇಲೆ ದೇವಿಯ ಉತ್ಸವ ಮೂರ್ತಿ ಕುಳ್ಳಿರಿಸಲಾಯಿತು. ಅಲಂಕೃತ ಪಲ್ಲಕ್ಕಿಗಳಲ್ಲಿ ಚಂಪಕಧಾಮಸ್ವಾಮಿ ಹಾಗೂ ಚಂಪಕವಲ್ಲಿ ಮಾರಮ್ಮ ದೇವಿಯ ಮೆರವಣಿಗೆ ಸಾಗಿತು.

ಪಂಚವಾದ್ಯ, ಚಂಡೆಮದ್ದಳೆ, ನಗಾರಿ, ಮರಗಾಲು ಕುಣಿತ, ಹಾಲಕ್ಕಿ ಕುಣಿತ, ವೀರಗಾಸೆ, ಕೀಲು ಕುದುರೆ ಸೇರಿದಂತೆ 30ಕ್ಕೂ ಹೆಚ್ಚು ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿದವು. ಇವುಗಳ ಪ್ರದರ್ಶನ ಆಕರ್ಷಕವಾಗಿತ್ತು. ಬನ್ನೇರುಘಟ್ಟದ ಪ್ರಮುಖ ಬೀದಿಗಳಲ್ಲಿ ವೈಭವದ ಜಂಬೂಸವಾರಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT