ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ಎಂ.ಕೃಷ್ಣಮೂರ್ತಿ ಬಿಜೆಪಿಗೆ ಸೇರ್ಪಡೆ

Last Updated 7 ಡಿಸೆಂಬರ್ 2020, 5:19 IST
ಅಕ್ಷರ ಗಾತ್ರ

ಮಾಗಡಿ: ’ದುಡಿಮೆಗೆ ತಕ್ಕ ಗೌರವ ಇಲ್ಲದ ಜೆಡಿಎಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವುದಾಗಿ‘ ರಾಜ್ಯ ಜೆಡಿಎಸ್‌ ಉಪಾಧ್ಯಕ್ಷ ಎಚ್‌.ಎಂ.ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.’ಎರಡೂವರೆ ವರ್ಷದಿಂದ ಜೆಡಿಎಸ್‌ನಲ್ಲಿ ನನಗೆ ಗೌರವ ನೀಡಲಿಲ್ಲ. ಪುರಸಭೆಯಲ್ಲಿ ಜೆಡಿಎಸ್‌ ಗೆ ಬಹುಮತವಿದ್ದರೂ ಶಾಸಕ ಮಂಜುನಾಥ್‌, ಬಿಜೆ‍ಪಿ ಅಧ್ಯಕ್ಷ ಸ್ಥಾನ ಪಡೆಯಲು ಸಹಕಾರ ನೀಡಿದರು. 2018ರ ಚುನಾವಣೆಯಲ್ಲಿ ಎಚ್‌.ಸಿ.ಬಾಲಕೃಷ್ಣ ಅವರನ್ನು ಸೋಲಿಸುವಂತೆ ದೇವೇಗೌಡ ಅವರು ಮನವಿ ಮಾಡಿದ್ದರು. ಮಾಗಡಿ ಕ್ಷೇತ್ರವನ್ನು ಕೆಂಪೇಗೌಡರ ಕಾಲದ ಆಡಳಿತ ಮರಳಿ ಪಡೆಯಲು ಡಿ.19ರಂದು ಬಿಜೆಪಿ ಗೆ ಸೇರ್ಪಡೆಯಾಗುತ್ತಿದ್ದೇನೆ’ ಎಂದರು.

ಹಿರಿಯರಾದ ಸಿದ್ದಣ್ಣ ತಾತ, ಕುದೂರು ಬಿಜೆಪಿ ಮುಖಂಡರಾದ ಸತ್ಯನಾರಾಯಣ ಶೆಟ್ಟಿ, ಕೃಷ್ಣಕುಮಾರ್‌, ಗಂಗಾಧರ್‌, ಪಾಳ್ಯದಹಳ್ಳಿ ಹನುಮಂತೇಗೌಡ, ಜ್ಯೋತಿಪಾಳ್ಯ ಸೀನಪ್ಪ, ದೊಡ್ಡಿ ಗೋಪಿ, ಕೊಟ್ಟಣ ಬೀದಿ ಜಯಮ್ಮ, ವಕೀಲರಾದ ಜಯಲಕ್ಷ್ಮೀ, ಆನಂದ್‌, ರಂಗೇಶ್‌ ಗೌಡ, ಮೋಹನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT