ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಧೀಶೆ ಕಾರು ಅಡ್ಡಗಟ್ಟಿದ ವಕೀಲರು

ರಾತ್ರಿ ವೇಳೆ ವಕೀಲನ ಜತೆ ಕಾರಿನಲ್ಲಿ ಪ್ರಯಾಣ
Last Updated 23 ಜನವರಿ 2022, 18:47 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನ್ಯಾಯಾಧೀಶೆಯೊಬ್ಬರುರಾತ್ರಿ ವೇಳೆ ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ಕಾರನ್ನುಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪೊಂದು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡ ವಿಡಿಯೊ ವೈರಲ್‌ ಆಗಿದೆ.

ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನ್ಯಾಯಾಧೀಶೆ ಮತ್ತು ವಕೀಲರೊಬ್ಬರ ಜೊತೆ ವಕೀಲರ ಗುಂಪು ನಡೆಸಿದ ಜಟಾಪಟಿ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಈ ವಿಡಿಯೊ ತುಣುಕು ಈಗ ಎಲ್ಲೆಡೆ ಹರಿದಾಡುತ್ತಿದೆ. ಕಾರಿನಲ್ಲಿ ಕುಳಿತಿದ್ದ ವಕೀಲನನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಗುಂಪು ನಂತರ ಕಾರು ಚಾಲನೆ ಮಾಡುತ್ತಿದ್ದ ನ್ಯಾಯಾಧೀಶೆಯನ್ನೂ ಕೆಳಗೆ ಇಳಿಯುವಂತೆ ‌ಒತ್ತಾಯಿಸಿರುವುದು ವಿಡಿಯೊದಲ್ಲಿದೆ.

ಈ ಘಟನೆ ನಡೆದು ಎರಡು ದಿನಗಳಾದರೂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲುಎಲ್ಲರೂ ಹಿಂಜರಿಯುತ್ತಿದ್ದಾರೆ. ಇದರ ಬೆನ್ನಲ್ಲೇ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಜ್ಯೋತಿ ಕಾಳೆ ಅವರನ್ನು ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT