‘ನಾನು ಇದುವರೆಗೂ ದೇವನಹಳ್ಳಿಯಿಂದ ಸ್ಪರ್ಧೆ ಬಯಸಿಲ್ಲ. ಹಲವಾರು ಮುಖಂಡರು ಬಂದು ಒತ್ತಾಯ ಮಾಡುತ್ತಿದ್ದಾರೆ. ನಾನು ರಾಷ್ಟ್ರ ರಾಜಕಾರಣದಲ್ಲಿ ಇದ್ದವನು. ರಾಜ್ಯ ರಾಜಕಾರಣದ ಕುರಿತು ಚಿಂತನೆ ಮಾಡಿಲ್ಲ. ಒಂದು ವೇಳೆ ಪಕ್ಷದ ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸುತ್ತೇನೆ’ ಎಂದು ಕೆ.ಎಚ್. ಮುನಿಯಪ್ಪ ತಮ್ಮನ್ನು ಸಂಪರ್ಕಿಸಿದ ‘ಪ್ರಜಾವಾಣಿ’ಗೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿದರು.
ಚಂದ್ರಪ್ಪ, ಜಿ.ಪಂ. ಮಾಜಿ ಸದಸ್ಯ ಚಂದೇನಹಳ್ಳಿ ಮುನಿಯಪ್ಪ, ಬುಳ್ಳಹಳ್ಳಿ ರಾಜಪ್ಪ, ನಾರಾಯಣಪ್ಪ, ಮುನಿರಾಜು, ಜಾಲಿಗೆ ಮುನಿರಾಜು ನಿಯೋಗದಲ್ಲಿದ್ದರು.