‘ಸಮಾಜದಲ್ಲಿನ ಕಂದಾಚಾರ, ಮೂಢನಂಬಿಕೆ, ಜಾತಿ ವ್ಯವಸ್ಥೆ, ಅಸಮಾನತೆಯನ್ನು ಖಂಡಿಸಿ ಸಮಾಜವನ್ನು ಕೀರ್ತನೆಗಳ ಮೂಲಕ ತಿದ್ದುವ ಕಾರ್ಯ ಮಾಡಿದ್ದಾರೆ. ಅವರ ಚಿಂತನೆಗಳನ್ನು ಯುವ ಸಮುದಾಯ ಅಳವಡಿಸಿಕೊಂಡು ಉತ್ತಮ ಸಮಾಜವನ್ನು ನಿರ್ಮಿಸಬೇಕು. ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕುರುಬ ಸಮುದಾಯದ ಯುವಕರು ಅಧ್ಯಯನ ಮತ್ತು ಸಂಶೋಧನೆ ನಡೆಸಬೇಕು. ಸಂಸ್ಕೃತಿಯ ಉಳಿವಿನಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ’ ಎಂದರು.