<p><strong>ಕನಕಪುರ:</strong> ತಾಲ್ಲೂಕಿನ ಸಾತನೂರು ಹೋಬಳಿ ಚೂಡಹಳ್ಳಿ ಗ್ರಾಮ ಪಂಚಾಯಿತಿಯ 2024-25 ಸಾಲಿನ ಸಾಮಾಜಿಕ ಪರಿಶೋಧನ ಗ್ರಾಮ ಸಭೆಯು ಶನಿವಾರ ನಡೆಯಿತು.</p>.<p>ಕನಕಪುರ ತಾಲ್ಲೂಕು ಸಿಡಿಪಿಓ ನಾರಾಯಣ್ ಪಂಚಾಯಿತಿ ನೋಡಲ್ ಅಧಿಕಾರಿಯಾಗಿ ಗ್ರಾಮ ಸಭೆ ನಡೆಸಿಕೊಟ್ಟರು.</p>.<p>ಸಾಮಾಜಿಕ ಪರಿಶೋಧನೆಯ ಜಿಲ್ಲಾ ಸಂಯೋಜಕ ಶ್ರೀನಿವಾಸ ಲೆಕ್ಕಪರಿಶೋಧನಾ ವರದಿ ಮಂಡಿಸಿ ಪಂಚಾಯತಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಪರಿಶೋಧನಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು.</p>.<p>ಅನುಷ್ಠಾನಗೊಂಡಿರುವ ಕಾಮಗಾರಿಗಳಲ್ಲಿ ಕೆಲವು ಲೋಪದೋಷಗಳಾಗಿದ್ದು, ಕೆಲವು ಕಾಮಗಾರಿಗಳನ್ನು ಅನುಷ್ಠಾನಗೊಂಡ ಮೇಲೆ ನಾಶ ಮಾಡಿರುವುದು ಕಂಡು ಬಂದಿದೆ ಅವುಗಳನ್ನು ಸರಿಪಡಿಸಿಕೊಳ್ಳಬೇಕೆಂದು ತಿಳಿಸಿದರು.</p>.<p>15ನೇ ಹಣಕಾಸು ಯೋಜನೆಯಲ್ಲಿ ಚರಂಡಿ ಸ್ವಚ್ಛತೆಗೆ ಹಣ ಬಳಸುವಂತಿಲ್ಲ. ಆದರೂ ಹಣ ಪಾವತಿ ಮಾಡಿದ್ದಾರೆ. ಕಾಮಗಾರಿಗಳಲ್ಲಿ ಆಗಿರುವ ಲೋಪ ದೋಷಗಳನ್ನು ನಿಗದಿತ ಕಾಲಾವಧಿಯಲ್ಲಿ ಸರಿಪಡಿಸುವಂತೆ ಸೂಚನೆ ನೀಡಿದರು.</p>.<p>ಗ್ರಾಮಸ್ಥರಾದ ಚಿಕ್ಕಸಿದ್ದೇಗೌಡ, ರಾಮಲಿಂಗೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ್, ಬಾಬು ಮಾತನಾಡಿ, ಕೆಲವು ವೈಯಕ್ತಿಕ ಕಾಮಗಾರಿಗಳಲ್ಲಿ ಒಂದೂವರೆ ವರ್ಷದಿಂದ ಹಣ ಬಿಡುಗಡೆಯಾಗಿಲ್ಲ. ಬಾಕಿ ಇರುವ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಉತ್ತಾಯಿಸಿದರು.</p>.<p>ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿವೆ. ಪಂಚಾಯತಿಯಿಂದ ಚರಂಡಿಗಳಲ್ಲಿನ ಹೂಳು ತೆಗೆಸಿ ನೀರು ನಿಲ್ಲದಂತೆ ಮಾಡಬೇಕು, ಸೊಳ್ಳೆಗಳ ನಾಶಕ್ಕೆ ಔಷಧಿ ಸಿಂಪಡಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.</p>.<p>ಪಿಡಿಒ ರಮೇಶ್ ಮಾತನಾಡಿ, ಪಂಚಾಯಿತಿ ವತಿಯಿಂದ ಅನುಷ್ಠಾನ ಗೊಂಡಿರುವ ಕಾಮಗಾರಿಗಳಲ್ಲಿ ಸಣ್ಣಪುಟ್ಟ ಲೋಪ ದೋಷಗಳು ಆಗಿರುವುದಾಗಿ ಲೆಕ್ಕಪರಿಶೋಧಕರು ತಿಳಿಸಿದ್ದಾರೆ. ಅವುಗಳನ್ನು ಪರಿಶೀಲಿಸಿ, ಸರಿಪಡಿಸಲಾಗುವುದು ಎಂದು ಸಭೆಗೆ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮು, ಉಪಾಧ್ಯಕ್ಷೆ ಸವಿತಾ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಸಾತನೂರು ಹೋಬಳಿ ಚೂಡಹಳ್ಳಿ ಗ್ರಾಮ ಪಂಚಾಯಿತಿಯ 2024-25 ಸಾಲಿನ ಸಾಮಾಜಿಕ ಪರಿಶೋಧನ ಗ್ರಾಮ ಸಭೆಯು ಶನಿವಾರ ನಡೆಯಿತು.</p>.<p>ಕನಕಪುರ ತಾಲ್ಲೂಕು ಸಿಡಿಪಿಓ ನಾರಾಯಣ್ ಪಂಚಾಯಿತಿ ನೋಡಲ್ ಅಧಿಕಾರಿಯಾಗಿ ಗ್ರಾಮ ಸಭೆ ನಡೆಸಿಕೊಟ್ಟರು.</p>.<p>ಸಾಮಾಜಿಕ ಪರಿಶೋಧನೆಯ ಜಿಲ್ಲಾ ಸಂಯೋಜಕ ಶ್ರೀನಿವಾಸ ಲೆಕ್ಕಪರಿಶೋಧನಾ ವರದಿ ಮಂಡಿಸಿ ಪಂಚಾಯತಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಪರಿಶೋಧನಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು.</p>.<p>ಅನುಷ್ಠಾನಗೊಂಡಿರುವ ಕಾಮಗಾರಿಗಳಲ್ಲಿ ಕೆಲವು ಲೋಪದೋಷಗಳಾಗಿದ್ದು, ಕೆಲವು ಕಾಮಗಾರಿಗಳನ್ನು ಅನುಷ್ಠಾನಗೊಂಡ ಮೇಲೆ ನಾಶ ಮಾಡಿರುವುದು ಕಂಡು ಬಂದಿದೆ ಅವುಗಳನ್ನು ಸರಿಪಡಿಸಿಕೊಳ್ಳಬೇಕೆಂದು ತಿಳಿಸಿದರು.</p>.<p>15ನೇ ಹಣಕಾಸು ಯೋಜನೆಯಲ್ಲಿ ಚರಂಡಿ ಸ್ವಚ್ಛತೆಗೆ ಹಣ ಬಳಸುವಂತಿಲ್ಲ. ಆದರೂ ಹಣ ಪಾವತಿ ಮಾಡಿದ್ದಾರೆ. ಕಾಮಗಾರಿಗಳಲ್ಲಿ ಆಗಿರುವ ಲೋಪ ದೋಷಗಳನ್ನು ನಿಗದಿತ ಕಾಲಾವಧಿಯಲ್ಲಿ ಸರಿಪಡಿಸುವಂತೆ ಸೂಚನೆ ನೀಡಿದರು.</p>.<p>ಗ್ರಾಮಸ್ಥರಾದ ಚಿಕ್ಕಸಿದ್ದೇಗೌಡ, ರಾಮಲಿಂಗೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ್, ಬಾಬು ಮಾತನಾಡಿ, ಕೆಲವು ವೈಯಕ್ತಿಕ ಕಾಮಗಾರಿಗಳಲ್ಲಿ ಒಂದೂವರೆ ವರ್ಷದಿಂದ ಹಣ ಬಿಡುಗಡೆಯಾಗಿಲ್ಲ. ಬಾಕಿ ಇರುವ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಉತ್ತಾಯಿಸಿದರು.</p>.<p>ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿವೆ. ಪಂಚಾಯತಿಯಿಂದ ಚರಂಡಿಗಳಲ್ಲಿನ ಹೂಳು ತೆಗೆಸಿ ನೀರು ನಿಲ್ಲದಂತೆ ಮಾಡಬೇಕು, ಸೊಳ್ಳೆಗಳ ನಾಶಕ್ಕೆ ಔಷಧಿ ಸಿಂಪಡಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.</p>.<p>ಪಿಡಿಒ ರಮೇಶ್ ಮಾತನಾಡಿ, ಪಂಚಾಯಿತಿ ವತಿಯಿಂದ ಅನುಷ್ಠಾನ ಗೊಂಡಿರುವ ಕಾಮಗಾರಿಗಳಲ್ಲಿ ಸಣ್ಣಪುಟ್ಟ ಲೋಪ ದೋಷಗಳು ಆಗಿರುವುದಾಗಿ ಲೆಕ್ಕಪರಿಶೋಧಕರು ತಿಳಿಸಿದ್ದಾರೆ. ಅವುಗಳನ್ನು ಪರಿಶೀಲಿಸಿ, ಸರಿಪಡಿಸಲಾಗುವುದು ಎಂದು ಸಭೆಗೆ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮು, ಉಪಾಧ್ಯಕ್ಷೆ ಸವಿತಾ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>