<p><strong>ಹೊಸಕೋಟೆ: </strong>ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಬಾರದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶರತ್ ಬಚ್ಚೇಗೌಡ ಗರಂ ಆದ ಘಟನೆ ನಡೆಯಿತು.</p>.<p>ತಾಲ್ಲೂಕು ಆಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಬಹುತೇಕ ಇಲಾಖೆಯ ಅಧಿಕಾರಿಗಳು ಗೈರುಹಾಜರಾಗಿದ್ದರು. ಇದರಿಂದ ಶಾಸಕರು ಕಾರ್ಯಕ್ರಮದ ನಂತರ ವಿಷಯ ಪ್ರಸ್ತಾಪಿಸಿ, ಕಾರ್ಯಕ್ರಮಕ್ಕೆ ಹಾಜರಾಗದ ಎಲ್ಲಾ ಅಧಿಕಾರಿಗಳಿಗೂ ಕೂಡಲೇ ನೋಟಿಸ್ ಜಾರಿ ಮಾಡುವಂತೆ ತಹಶೀಲ್ದಾರ್ಗೆ ಸೂಚಿಸಿದರು.</p>.<p>‘ಕನ್ನಡ ರಾಜ್ಯೋತ್ಸವ ಯಾರದೋ ಮನೆಯ ಕಾರ್ಯಕ್ರಮವಲ್ಲ. ಖಾಸಗಿ ವ್ಯಕ್ತಿಯ ಹುಟ್ಟುಹಬ್ಬವಲ್ಲ. ನಮಗೆ ಅನ್ನ ಕೊಡುತ್ತಿರುವ, ಕೆಲಸ ಕೊಟ್ಟಿರುವ ನಮ್ಮ ರಾಜ್ಯಕ್ಕೆ ಗೌರವ ನೀಡದಿದ್ದರೆ ಹೇಗೆ, ಸರ್ಕಾರಿ ಸಂಬಳ ಪಡೆಯುವವರು ಕಾರ್ಯಕ್ರಮಕ್ಕೆ ಬಾರದಿರುವುದು ಸರಿಯಲ್ಲ’ ಎಂದು ಹೇಳಿದರು.</p>.<p>ಇಷ್ಟಕ್ಕೇ ಸಮಾಧಾನವಾಗದ ಶಾಸಕರು, ಜಿಲ್ಲಾಧಿಕಾರಿ ಜೊತೆಗೆ ಮಾತನಾಡಿ ತಮ್ಮ ಕಚೇರಿಯಲ್ಲಿಯೇ ಗೈರುಹಾಜರಾಗಿರುವ ಅಧಿಕಾರಿಗಳ ಸಭೆ ಕರೆದು ಲಿಖಿತವಾಗಿ ಅವರಿಂದ ಕಾರಣ ಕೇಳಿವಂತೆ ಸೂಚಿಸಿದರು.</p>.<p>ಕರ್ನಾಟಕ ಮುಂಚೂಣಿಯಲ್ಲಿದೆ: ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ, ‘ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿದಿದ್ದು ದೇಶದಲ್ಲಿ ಅಗ್ರಸ್ಥಾನದಲ್ಲಿದೆ’ ಎಂದರು.</p>.<p>ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಎಲ್ಲವನ್ನೂ ಕೇಂದ್ರಿಕೃತ ವ್ಯವಸ್ಥೆಗೆ ತರುತ್ತಿದೆ. ಇದರಿಂದ ರಾಜ್ಯಗಳ ಅಸ್ತಿತ್ವಕ್ಕೆ ಧಕ್ಕೆ ಎದುರಾಗಿದೆ. ರಾಜ್ಯಕ್ಕೆ ಬರಬೇಕಾದ ಕೇಂದ್ರದ ಪಾಲು ಸರಿಯಾಗಿ ಬರುತ್ತಿಲ್ಲ. ಇದರ ವಿರುದ್ಧ ಪ್ರಜೆಗಳು ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿದ ಮುಂಗಡ ಪತ್ರದಲ್ಲಿ ಕೇಂದ್ರದಿಂದ ₹ 33 ಸಾವಿರ ಕೋಟಿ ಸಾಲ ಪಡೆದಿದೆ. ಆದರೆ, ಕೇಂದ್ರದಿಂದ ಬರಬೇಕಾದ ತೆರಿಗೆ ಹಣ ಬಾಕಿ ಉಳಿದಿದೆ. ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದರು.</p>.<p>ಕರ್ನಾಟಕವು ವಿವಿಧತೆಯಲ್ಲಿ ಏಕತೆ ಸಾಧಿಸುತ್ತಾ ಬಂದಿದೆ. ಈಗ ಚುನಾವಣಾ ನೀತಿಸಂಹಿತೆ ಹಾಗೂ ಕೊರೊನಾ ಕಾರಣದಿಂದ ಸರಳವಾಗಿ ರಾಜ್ಯೋತ್ಸವ ಅಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ, ನಗರಸಭಾ ಸದಸ್ಯರಾದ ಕೇಶವಮೂರ್ತಿ, ಗೌತಮ್, ರಾಕೇಶ್, ಕನ್ನಡ ಸಂಘದ ಹೋ.ರಾ. ವೆಂಕಟೇಶ್, ರಾಜಣ್ಣ, ಮುಖಂಡರಾದ ಉದಯ್ ಕುಮಾರ್, ವಿಜಯ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಬಾರದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಾಸಕ ಶರತ್ ಬಚ್ಚೇಗೌಡ ಗರಂ ಆದ ಘಟನೆ ನಡೆಯಿತು.</p>.<p>ತಾಲ್ಲೂಕು ಆಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಬಹುತೇಕ ಇಲಾಖೆಯ ಅಧಿಕಾರಿಗಳು ಗೈರುಹಾಜರಾಗಿದ್ದರು. ಇದರಿಂದ ಶಾಸಕರು ಕಾರ್ಯಕ್ರಮದ ನಂತರ ವಿಷಯ ಪ್ರಸ್ತಾಪಿಸಿ, ಕಾರ್ಯಕ್ರಮಕ್ಕೆ ಹಾಜರಾಗದ ಎಲ್ಲಾ ಅಧಿಕಾರಿಗಳಿಗೂ ಕೂಡಲೇ ನೋಟಿಸ್ ಜಾರಿ ಮಾಡುವಂತೆ ತಹಶೀಲ್ದಾರ್ಗೆ ಸೂಚಿಸಿದರು.</p>.<p>‘ಕನ್ನಡ ರಾಜ್ಯೋತ್ಸವ ಯಾರದೋ ಮನೆಯ ಕಾರ್ಯಕ್ರಮವಲ್ಲ. ಖಾಸಗಿ ವ್ಯಕ್ತಿಯ ಹುಟ್ಟುಹಬ್ಬವಲ್ಲ. ನಮಗೆ ಅನ್ನ ಕೊಡುತ್ತಿರುವ, ಕೆಲಸ ಕೊಟ್ಟಿರುವ ನಮ್ಮ ರಾಜ್ಯಕ್ಕೆ ಗೌರವ ನೀಡದಿದ್ದರೆ ಹೇಗೆ, ಸರ್ಕಾರಿ ಸಂಬಳ ಪಡೆಯುವವರು ಕಾರ್ಯಕ್ರಮಕ್ಕೆ ಬಾರದಿರುವುದು ಸರಿಯಲ್ಲ’ ಎಂದು ಹೇಳಿದರು.</p>.<p>ಇಷ್ಟಕ್ಕೇ ಸಮಾಧಾನವಾಗದ ಶಾಸಕರು, ಜಿಲ್ಲಾಧಿಕಾರಿ ಜೊತೆಗೆ ಮಾತನಾಡಿ ತಮ್ಮ ಕಚೇರಿಯಲ್ಲಿಯೇ ಗೈರುಹಾಜರಾಗಿರುವ ಅಧಿಕಾರಿಗಳ ಸಭೆ ಕರೆದು ಲಿಖಿತವಾಗಿ ಅವರಿಂದ ಕಾರಣ ಕೇಳಿವಂತೆ ಸೂಚಿಸಿದರು.</p>.<p>ಕರ್ನಾಟಕ ಮುಂಚೂಣಿಯಲ್ಲಿದೆ: ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ, ‘ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿದಿದ್ದು ದೇಶದಲ್ಲಿ ಅಗ್ರಸ್ಥಾನದಲ್ಲಿದೆ’ ಎಂದರು.</p>.<p>ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಎಲ್ಲವನ್ನೂ ಕೇಂದ್ರಿಕೃತ ವ್ಯವಸ್ಥೆಗೆ ತರುತ್ತಿದೆ. ಇದರಿಂದ ರಾಜ್ಯಗಳ ಅಸ್ತಿತ್ವಕ್ಕೆ ಧಕ್ಕೆ ಎದುರಾಗಿದೆ. ರಾಜ್ಯಕ್ಕೆ ಬರಬೇಕಾದ ಕೇಂದ್ರದ ಪಾಲು ಸರಿಯಾಗಿ ಬರುತ್ತಿಲ್ಲ. ಇದರ ವಿರುದ್ಧ ಪ್ರಜೆಗಳು ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿದ ಮುಂಗಡ ಪತ್ರದಲ್ಲಿ ಕೇಂದ್ರದಿಂದ ₹ 33 ಸಾವಿರ ಕೋಟಿ ಸಾಲ ಪಡೆದಿದೆ. ಆದರೆ, ಕೇಂದ್ರದಿಂದ ಬರಬೇಕಾದ ತೆರಿಗೆ ಹಣ ಬಾಕಿ ಉಳಿದಿದೆ. ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದರು.</p>.<p>ಕರ್ನಾಟಕವು ವಿವಿಧತೆಯಲ್ಲಿ ಏಕತೆ ಸಾಧಿಸುತ್ತಾ ಬಂದಿದೆ. ಈಗ ಚುನಾವಣಾ ನೀತಿಸಂಹಿತೆ ಹಾಗೂ ಕೊರೊನಾ ಕಾರಣದಿಂದ ಸರಳವಾಗಿ ರಾಜ್ಯೋತ್ಸವ ಅಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ, ನಗರಸಭಾ ಸದಸ್ಯರಾದ ಕೇಶವಮೂರ್ತಿ, ಗೌತಮ್, ರಾಕೇಶ್, ಕನ್ನಡ ಸಂಘದ ಹೋ.ರಾ. ವೆಂಕಟೇಶ್, ರಾಜಣ್ಣ, ಮುಖಂಡರಾದ ಉದಯ್ ಕುಮಾರ್, ವಿಜಯ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>